Districts

ಮಾಧುಸ್ವಾಮಿ ಕಾಂಗ್ರೆಸ್ಸಿಗೆ ಬಂದ್ರೆ ಸ್ವಾಗತ; ಮಾಜಿ ಶಾಸಕ ಕೆ.ಎನ್‌.ರಾಜಣ್ಣ

ತುಮಕೂರು: ಸಚಿವ ಮಾಧುಸ್ವಾಮಿ ಕಾಂಗ್ರೆಸ್‌ ಪಕ್ಷಕ್ಕೆ ಬರುವುದಾದರೆ ನಾವು ಸ್ವಾಗತಿಸುತ್ತೇವೆ. ಇದಕ್ಕೆ ನಮ್ಮ ಅಭ್ಯಂತರ ಇರುವುದಿಲ್ಲ ಎಂದು ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಮಾಧುಸ್ವಾಮಿಯವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ಸಿಗಬೇಕಾಗಿತ್ತು. ಆದ್ರೆ ನೀಡಿಲ್ಲ ಎಂದರು.

ಸಚಿವ ಮಾಧುಸ್ವಾಮಿಯವರು ನಮ್ಮ ಪಕ್ಷಕ್ಕೆ ಬರುವುದಾದರೆ ನಾವು ಯಾರೂ ವಿರೋಧಿಸುವುದಿಲ್ಲ, ಅವರನ್ನು ಸ್ವಾಗತಿಸುತ್ತೇವೆ. ಆದ್ರೆ ಅವರು ಬರುವುದಾದರೆ ಪಕ್ಷಕ್ಕೆ ಸೇರಿಸಿಕೊಳ್ಳುವ ತೀರ್ಮಾನವನ್ನು ಕೆಪಿಸಿಸಿ ಅಧ್ಯಕ್ಷರು ಮಾಡುತ್ತಾರೆ ಎಂದು ಕೆ.ಎನ್‌.ರಾಜಣ್ಣ ಹೇಳಿದ್ದಾರೆ.

 

Share Post