DistrictsPolitics

ಕೋಲಾರ ಜೆಡಿಎಸ್‌ ಅಭ್ಯರ್ಥಿ ಬದಲಾವಣೆ ಇಲ್ಲ; ಹೆಚ್ಡಿಕೆ ಸ್ಪಷ್ಟನೆ

ಕೋಲಾರ; ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಘೋಷಣೆಯಾಗಿದೆ. ಶ್ರೀನಾಥ್‌ ಅವರೇ ಜೆಡಿಎಸ್‌ ಅಭ್ಯರ್ಥಿ. ಯಾರೇ ಬಂದರೂ ಶ್ರೀನಾಥ್‌ ಅವರೇ ಚುನಾವಣೆ ಎದುರಿಸುತ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಕ್ಯಾಲನೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ ಉತ್ತಮ ಜನಬೆಂಬಲ ಸಿಗುತ್ತಿದ್ದು, ಜೆಡಿಎಸ್‌ ಈ ಬಾರಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೋಲಾರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆಂಬ ಹಿನ್ನೆಲೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಬದಲಾಗುತ್ತಾರೆಂಬ ಮಾತು ಕೇಳಿಬಂದಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ, ಶ್ರೀನಾಥ್‌ ಅವರು ಹಲವಾರು ತಿಂಗಳುಗಳಿಂದ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಜನರ ಜೊತೆ ಬೆರೆಯುತ್ತಿದ್ದಾರೆ. ಹೀಗಾಗಿ ಅವರೇ ನಮ್ಮ ಅಭ್ಯರ್ಥಿ ಎಂದರು.

ಜೆಡಿಎಸ್‌ನ ಪಂಚರತ್ನ ಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು ಇಂದು ಶ್ರೀನಿವಾಸಪುರ ಕ್ಷೇತ್ರದಲ್ಲಿ ಯಾತ್ರೆ ಸಾಗಲಿದೆ.

Share Post