CrimeDistricts

ಕಿರು ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಬೇಸರ; ಪ್ರಥಮ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

ಕೊರಟಗೆರೆ; ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿ ಗುಣಶ್ರೀ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಗುಣಶ್ರೀ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಮಧ್ಯವೆಂಕಟಾಪುರ ಗ್ರಾಮದ ಸಿದ್ದಲಿಂಗೇಶ್ವರ ಎಂಬುವವರ ಮಗಳು ಎಂದು ತಿಳಿದು ಬಂದಿದೆ.

ಗುಣಶ್ರೀ ಕೊರಟಗೆರೆ ಪಟ್ಟಣದ ಪ್ರಿಯದರ್ಶಿನಿ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಆದ್ರೆ ಪ್ರಥಮ ಪಿಯುಸಿ ಕಿರು ಪರೀಕ್ಷೆಯಲ್ಲಿ ಆಕೆಗೆ ಕಡಿಮೆ ಅಂಕ ಬಂದಿದೆ. ಇದರಿಂದ ಬೇಸತ್ತ ಆಕೆ ಕಾಲೇಜು ಬಳಿ ಇದ್ದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅದಕ್ಕೂ ಮುನ್ನ ಗುಣಶ್ರೀ ಡೆತ್‌ ನೋಟ್‌ ಬರೆದಿದ್ದಾಳೆ. ಓದುವುದು‌ ತಲೆಗೆ ಹತ್ತುತ್ತಿಲ್ಲ. ನಾನು ಆತ್ಮಹತ್ಯೆ ಮಾಡ್ಕೋತಿದೀನಿ. ನನ್ನನ್ನು ಕ್ಷಮಿಸಿ ಅಪ್ಪ, ಅಮ್ಮ ಎಂದು ಗುಣಶ್ರೀ ಡೆತ್‌ ನೋಟ್‌ನಲ್ಲಿ ಬರೆದಿದ್ದಾಳೆ.

Share Post