Districts

ಕೋಟಾ ನೋಟ್ ಕಿಂಗ್ ಪಿನ್ ಅರೆಸ್ಟ್

ಚಿತ್ರದುರ್ಗ: ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ಕೋಟಾನೋಟ್ ನೀಡುವ ಮೂಲಕ ವಂಚಿಸಿ ನಾಪತ್ತೆಯಾಗಿದ್ದ ನಗರಸಭೆ ಸದಸ್ಯ ಚಂದ್ರಶೇಖರ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಪತ್ನಿ ದೇವಿಕಾ, ಬಾಬು ಹಾಗೂ ಅರುಣ್ ಬಂಧಿತರು. ಈತ ಹಲವು ವರ್ಷಗಳಿಂದ ಕೋಟಾನೋಟ್ ದಂಧೆ ನಡೆಸುತ್ತಿದ್ದು, ಹಲವರನ್ನು ವಂಚಿಸಿ ಪೊಲೀಸರಿಗೆ ಯಾಮಾರಿಸಿಕೊಂಡಿದ್ದ.
ವಾರ್ಡ್ ನಂ.4ರ ಜೆಡಿಎಸ್‌ ನಗರಸಭೆ ಸದಸ್ಯ ಚಂದ್ರಶೇಖರ್ ಅಲಿಯಾಸ್ ಟೋಲಿ ಚಂದ್ರನನ್ನು ಚಿತ್ರದುರ್ಗ ಎಸ್‍ಪಿ ಜಿ.ರಾಧಿಕಾ ನೇತೃತ್ವದಲ್ಲಿ ಬಂಧಿಸಲಾಗಿದೆ.ಡಿಸೆಂಬರ್ 6 ರಂದು 6ಲಕ್ಷ ನಗದು ಪಡೆದು 18 ಲಕ್ಷ ನೀಡುವುದಾಗಿ ನಂಬಿಸಿ ವಂಚಿಸಿದ್ದಾರೆಂಬ ಆರೋಪ ಕೇಳಿಬಂದಿತ್ತು.

ಈ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಚಿತ್ರದುರ್ಗ ಪೊಲೀಸರು ಆಂದ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ. ದೊಡ್ಡಬಳ್ಳಾಪುರದ ನಾಗರಾಜ್ ಅವರಿಂದ 6ಲಕ್ಷ ಅಸಲಿ ಹಣ ಪಡೆದು 18ಲಕ್ಷ ಹಣವಿದೆ ಎಂದು ಬ್ಯಾಗ್ ನೀಡಿ ಮೋಸ ಮಾಡಲಾಗಿತ್ತು. ಹೀಗಾಗಿ ಪ್ರಕರಣ ದಾಖಲಿಸಿಕೊಂಡ ಚಿತ್ರದುರ್ಗ ಪೊಲೀಸರು, ಚಂದ್ರಶೇಖರ್ ಮತ್ತಿತರರ ವಿರುದ್ಧ ಕೇಸ್ ದಾಖಲಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಸಿಪಿಐ ಶಂಖರಪ್ಪ ಸೇರಿದಂತೆ ಪ್ರಕರಣ ಭೇದಿಸಿದ ಎಲ್ಲಾ ಸಿಬ್ಬಂದಿ ಎಸ್‍ಪಿ ರಾಧಿಕಾ ಅಭಿನಂದಿಸಿದ್ದಾರೆ.

Share Post