Districts

ಶಿಡ್ಲಘಟ್ಟದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಘಟಕಕ್ಕೆ ಚಾಲನೆ

ಶಿಡ್ಲಘಟ್ಟ: ಸಾರಿಗೆ ಸಚಿವ ಶ್ರೀರಾಮುಲು ಹಾಗೂ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರು ಶಿಡ್ಲಘಟ್ಟದ  ಹಿತ್ತಲಹಳ್ಳಿ ಗೇಟ್ ಬಳಿ ನೂತನವಾಗಿ ನಿರ್ಮಾಣವಾ ಗಿರುವ ಕೆ ಎಸ್ ಆರ್ ಟಿ ಸಿ ಬಸ್ ಘಟಕದ ಉದ್ಘಾಟನೆ ನೆರವೇರಿಸಿದರು. ಅನಂತರ ಅವರು ನಗರಸಭೆಯ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. 

ಕಾರ್ಯಕ್ರಮದ ನಂತರ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ ಎಂ ಟಿ ಬಿ ನಾಗರಾಜ್ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಮುಂದಿನ ವಿಧಾನ ಸಭೆ ಚುನಾವಣೆಗಳ ದಿಕ್ಸೂಚಿ ಯಾಗಲಿದೆ ಎಂದರು. ನಂತರ ಮಾತನಾಡಿದ ಸಾರಿಗೆ ಸಚಿವ ಬಿ. ಶ್ರೀರಾಮುಲು ರಾಜ್ಯದಲ್ಲಿ ಬಸ್ ಸಂಚಾರ ಇರದ ಗ್ರಾಮ ಇರಬಾರದು, ಶಾಲಾ ಮಕ್ಕಳಿಗೆ ಬಸ್ ಸಂಚಾರ ಸಮಯಕ್ಕೆ ಸರಿಯಾಗಿ ಸುಗಮವಾಗಬೇಕು ಎಂಬುದು ನಮ್ಮ ದ್ಯೇಯ ಎಂದರು. ಇನ್ನು ಪಂಚರಾಜ್ಯಗಳ ಫಲಿತಾಂಶದ ಕುರಿತು ಮಾತನಾಡಿದ ಅವರು ಪಂಚ ರಾಜ್ಯಗಳಲ್ಲಿ ನಡೆದ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷದ ಕತೆ “ಕೇಲ್ ಕಥಮ್ ದುಖಾನ್ ಬಂದ್” ಆಗಿದೆ ನಮ್ಮ ರಾಜ್ಯದಲ್ಲೂ ಕೂಡ ಮುಂದಿನ ಚುನಾವ ಣೆಯಲ್ಲಿ ಕಾಂಗ್ರೆಸ್ ಮನೆಗೆ ಹೋಗಲಿದೆ ಎಂದು ಅಭಿಪ್ರಾಯ ಪಟ್ಟರು.

Share Post