DistrictsPolitics

ಕೂಡ್ಲಿಗಿ ಶಾಸಕ ಎನ್‌.ವೈ.ಗೋಪಾಲಕೃಷ್ಣ ರಾಜೀನಾಮೆ; ಶೀಘ್ರವೇ ಕಾಂಗ್ರೆಸ್‌ ಸೇರ್ಪಡೆ

ಶಿರಸಿ; ಕೂಡ್ಲಿಗಿ ಬಿಜೆಪಿ ಶಾಸಕ ಎನ್‌.ವೈ.ಗೋಪಾಲಕೃಷ್ಣ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಶಿರಸಿಯಲ್ಲಿದ್ದ ಸ್ಪೀಕರ್‌ ವಿಶ್ವೇಶ್ವರ ಕಾಗೇರಿಯವರನ್ನು ಭೇಟಿ ಮಾಡಿದ ಗೋಪಾಲಕೃಷ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹೀಗಾಗಿ ಅವರು ಕಾಂಗ್ರೆಸ್‌ ಸೇರೋದು ಪಕ್ಕಾ ಆಗಿದೆ.

ಇತ್ತೀಚೆಗಷ್ಟೇ ಗೋಪಾಲಕೃಷ್ಣ ಅವರು ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಇದಾದ ಎರಡು ಮೂರು ದಿನದಲ್ಲೇ ಗೋಪಾಲಕೃಷ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದ ಗೋಪಾಲಕೃಷ್ಣ ಅವರು ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಶಾಸಕರಾಗಿದ್ದರು. ಆದ್ರೆ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅವರಿಗೆ ಟಿಕೆಟ್‌ ನಿರಾಕರಿಸಿತ್ತು. ಹೀಗಾಗಿ ಬಿಜೆಪಿ ಸೇರಿ ಕೂಡ್ಲಿಗಿಯಿಂದ ಸ್ಪರ್ಧೆ ಮಾಡಿ ಗೆದ್ದಿದ್ದರು. ಇದೀಗ ಅವರು ಕಾಂಗ್ರೆಸ್‌ಗೆ ವಾಪಸ್‌ ಆಗುತ್ತಿದ್ದಾರೆ.

Share Post