Districts

ಜೆಡಿಎಸ್‌ ಹಿತಶತ್ರುಗಳಿಂದ ಕಾಂಗ್ರೆಸ್‌ಗೆ ಲಾಭವಿಲ್ಲ; ಹೆಚ್ಡಿಕೆ

ಮೈಸೂರು; ಜೆಡಿಎಸ್‌ ಹಿತಶತ್ರುಗಳಿಂದ ಕಾಂಗ್ರೆಸ್‌ನವರಿಗೆ ಲಾಭವಾಗುವುದಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಂಡ್ಯಕ್ಕೆ ನನ್ನ ಕೊಡುಗೆ ಏನು ಎಂದು ಪ್ರಶ್ನೆ ಮಾಡಿದ್ದಾರೆ. ಮೊದಲು ಅವರ ಕೊಡುಗೆ ಏನು ಎಂಬುದನ್ನು ತಿಳಿಸಲಿ ಎಂದು ಕುಮಾರಸ್ವಾಮಿ ಇದೇ ವೇಳೆ ಆಗ್ರಹಿಸಿದ್ದಾರೆ. ಇನ್ನು ತಾಂಬೂಲ ಪ್ರಶ್ನೆ ಬಗ್ಗೆ ಮಾತನಾಡಿದ ಅವರು, ತಾಂಬೂಲ ಪ್ರಶ್ನೆಗಳಿಗಿಂತ ಕೇಶವಕೃಪಾದಲ್ಲಿ ಎಲ್ಲಾ ತೀರ್ಮಾನ ಆಗುತ್ತದೆ. ಅಲ್ಲಿಂದ ಬರುವ ಸಂದೇಶಗಳನ್ನು ಇವರೆಲ್ಲರೂ ಪಾಲಿಸುತ್ತಾರೆ ಎಂದರು.

Share Post