CrimeDistricts

ಪೈಪ್‌ಲೈನ್‌ ಕಾಮಗಾರಿ ವೇಳೆ ಮಣ್ಣು ಕುಸಿತ; ಕಾರ್ಮಿಕ ದಾರುಣ ಸಾವು!

ಶಿವಮೊಗ್ಗ; ರೇಲ್ವೇ ಮೇಲ್ಸೆತುವೆಗಾಗಿ ನಡೆಯುತ್ತಿದ್ದ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇಲ್ಲಿನ ಸವಳಂಗ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಮಣ್ಣು ಕುಸಿದಿದ್ದು, ಒಬ್ಬ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಶಿವಮೊಗ್ಗ ತಾಲ್ಲೂಕಿನ ಮಂಡೇನಕೊಪ್ಪ ನಿವಾಸಿ ಸತೀಶ್‌ ನಾಯ್ಕ ಎಂಬ ಕಾರ್ಮಿಕನೇ ಸಾವನ್ನಪ್ಪಿದ ದುರ್ದೈವಿಯಾಗಿದ್ಧಾನೆ. ಮೇಲ್ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ಅಂಡರ್‌ಗ್ರೌಂಡ್‌ ಪೈಪ್‌ಲೈನ್‌ ಹಾಕಲು 11 ಅಡಿ ಆಳದ ಗುಂಡಿಯನ್ನು ತೋಡಲಾಗುತ್ತಿತ್ತು. ಜೆಸಿಬಿ ಮೂಲಕ ಮಣ್ಣು ತೆಗೆಯುತ್ತಿದ್ದ, ಕಾರ್ಮಿಕ ಸತೀಶ್‌ ನಾಯ್ಕ ಗುಂಡಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದರು. ಈ ವೇಳೆ ಮಣ್ಣು ಕುಸಿದಿದೆ.

ಕಾರ್ಮಿಕನನ್ನು ರಕ್ಷಣೆ ಮಾಡಲು ಎಷ್ಟೇ ಶತ ಪ್ರಯತ್ನ ಮಾಡಿದರೂ ಪ್ರಯೋಜನವಾಗಲಿಲ್ಲ. ಮಣ್ಣು ಕುಸಿದಿದ್ದರಿಂದ ತಲೆಗೆ ತೀವ್ರ ಪೆಟ್ಟಾಗಿ ಮೆದುಳು ಹೊರಬಂದಿದೆ ಎಂದು ತಿಳಿದುಬಂದಿದೆ.

 

Share Post