Districts

ಪ್ರತಿಭಟನೆ ಮಾಡಲಿ, ಡಿಮ್ಯಾಂಡ್‌ ಈಡೇರಿಸಲು ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು; ಖಾಸಗಿ ಸಾರಿಗೆ ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಪ್ರತಿಭಟನೆ ಮಾಡುತ್ತಿದ್ದಾರೆ ಮಾಡಲಿ. ಆದ್ರೆ ಅವರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿಬಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದ ಖಾಸಗಿ ಸಾರಿಗೆ ಮುಷ್ಕರ ನಡೆಯುತ್ತಿದೆ. ಈ ಬಗ್ಗೆ ಮಾತನಾಡಿರು ಅವರು, ಪ್ರತಿಭಟನೆ ಮಾಡೋದಕ್ಕೆ ಎಲ್ಲರಿಗೂ ಹಕ್ಕಿದೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ತಡೆಯೋದಕ್ಕೆ ಆಗೋದಿಲ್ಲ. ಆದ್ರೆ ಅವರು ಅಸಾಧ್ಯವಾದ ಡಿಮ್ಯಾಂಡ್‌ ಗಳನ್ನು ಮುಂದಿಟ್ಟಿದ್ದಾರೆ. ಅವುಗಳನ್ನು ಈಡೇರಿಸುವುದಕ್ಕೆ ಆಗುವುದಿಲ್ಲ ಎಂದು ಹೇಳಿದ್ದಾರೆ.

 

 

Share Post