DistrictsHealth

ಬ್ಯಾಡ್ಮಿಂಟನ್‌ ಆಡುವಾಗ ಕುಸಿದುಬಿದ್ದ ಲೋಕಾಯುಕ್ತ ಅಧಿಕಾರಿ; ಹೃದಯಾಘಾತಕ್ಕೆ ಬಲಿ

ವಿಜಯಪುರ; ಲೋಕಾಯುಕ್ತದಲ್ಲಿ ಡಿವೈಎಸ್‌ಪಿ ಆಗಿದ್ದ ಅಧಿಕಾರಿಯೊಬ್ಬರು ಬ್ಯಾಡ್ಮಿಂಟನ್‌ ಆಡುವಾಗ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ವಿಜಯಪುರದ ಜಿಲ್ಲಾ ಕ್ರೀಡಾಂಗಣದಲ್ಲಿ ಈ ದುರ್ಘಟನೆ ನಡೆದಿದೆ. ಬುಧವಾರ ಸಂಜೆ ಲೋಕಾಯುಕ್ತ ಡಿವೈಎಸ್‌ಪಿ ಅರುಣ್‌ ನಾಯಕ್‌ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್‌ ಆಡುತ್ತಿದ್ದರು. ಈ ವೇಳೆ ಎದೆನೋವಿನಿಂದ ಕುಸಿದುಬಿದ್ದಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಅರುಣ್‌ ನಾಯಕ್‌ ಅವರಿಗೆ ಪತ್ನಿ ಹಾಗೂ ಓರ್ವ ಪುತ್ರ ಇದ್ದಾನೆ. ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದಾರೆ ಎಂದು ತಿಳಿದುಬಂದಿದೆ. ಪತ್ನಿ ಹಾಗೂ ಪುತ್ರ ಇಬ್ಬರೂ ಬೆಂಗಳೂರಿನಲ್ಲಿದ್ದವರು. ವಿಷಯ ತಿಳಿಯುತ್ತಿದ್ದಂತೆ ಇಬ್ಬರೂ ವಿಜಯಪುರಕ್ಕೆ ಬಂದಿದ್ದಾರೆ.

 

Share Post