CrimeDistricts

ಕಳೆದು ಹೋಯ್ತು ನಿಶ್ಚಿತಾರ್ಥದ ಉಂಗುರ; ವಿಷ ಕುಡಿದು ಯುವಕ ಆತ್ಮಹತ್ಯೆ

ತುಮಕೂರು; ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತುಮಕೂರು ನಗರದ ದೇವರಾಯಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. ಕ್ಯಾತ್ಸಂದ್ರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದ್ದು, ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಮೂರು ತಿಂಗಳ ಹಿಂದೆ ಯುವಕನಿಗೆ ಬೆಂಗಳೂರು ಮೂಲದ ಯುವತಿ ಜೊತೆ ವಿವಾಹ ನಿಶ್ಚಯವಾಗಿತ್ತು. ಆಗ ಯುವತಿ ತೊಡಿಸಿದ ಉಂಗುರ ಸ್ವಾನ ಮಾಡುವಾಗ ಕಳೆದುಹೋಗಿದೆ. ಈ ವಿಚಾರ ಮನೆಯವರಿಗೆ ಗೊತ್ತಾದರೆ ಬೈಯ್ಯುತ್ತಾರೆ ಎಂದು ಯುವಕ ಹೆದರಿದ್ದಾನೆ. ಹೀಗಾಗಿ ಆತ ವಿಷ ಸೇವಿಸಿದ್ದಾನೆ. ಈ ವಿಚಾರ ಗೊತ್ತಾಗಿ ಮನೆಯವರು ಆತನನ್ನು ಆಸ್ಪತ್ರೆಗೆ ಸೇರಿಸಿದ್ದರು.

ನವೆಂಬರ್‌ 17ರಂದು ಯುವಕ ವಿಷ ಸೇವಿಸಿದ್ದು, ಐದು ದಿನಗಳಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ.

 

Share Post