Districts

ಪೊಲೀಸ್‌ ಠಾಣೆ ಎದುರೇ ಮದುವೆಯಾದ ಪ್ರೇಮಿಗಳು!

ಹುಬ್ಬಳ್ಳಿ; ಯುವತಿಯ ಪೋಷಕರ ದೂರಿನ ಹಿನ್ನೆಲೆಯಲ್ಲಿ ಠಾಣೆಗೆ ಬಂದಿದ್ದ ಜೋಡಿ ಅಲ್ಲಿಯೇ ವಿವಾಹವಾಗಿರುವ ಘಟನೆ ಧಾರವಾಡದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಬಾಡ ಗ್ರಾಮದ ಮಂಜುನಾಥ ಹಾಗೂ ಉಮೆಕುಲ್ಸುಮಾ ಕರಿಗಾರ ಮದುವೆಯಾದವರು.

ಇವರಿಬ್ಬರೂ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದ್ರೆ ಇದಕ್ಕೆ ಯುವತಿಯ ಮನೆಯವರ ವಿರೋಧವಿತ್ತು. ಹೀಗಾಗಿ ಇಬ್ಬರು ರಿಜಿಸ್ಟರ್‌ ಮ್ಯಾರೇಜ್‌ ಆಗಿದ್ದರು. ಈ ನಡುವೆ ಯುವತಿಯ ಮನೆಯವರು ಮಂಜುನಾಥ್‌ ವಿರುದ್ಧ ಕಿಡ್ನ್ಯಾಪ್‌ ಕೇಸ್‌ ದಾಖಲಿಸಿದ್ದರು. ಈ ಹಿನ್ನೆಯಲ್ಲಿ ಪೊಲೀಸರು ಇಬ್ಬರನ್ನೂ ವಿಚಾರಣೆಗೆ ಕರೆಸಿಕೊಂಡಿದ್ದರು. ಇದೇ ವೇಳೆ ಪೊಲೀಸರು ಯುವತಿಯನ್ನು ಸಾಂತ್ವನ ಕೇಂದ್ರಕ್ಕೆ ರವಾನಿಸಿದ್ದಾರೆ. ಯುವಕನ್ನು ವಶಕ್ಕೆ ಪಡೆದಿದ್ದಾರೆ.

ಈ ವಿಚಾರ ತಿಳಿದ ಬಜರಂಗದಳದ ಕಾರ್ಯಕರ್ತರು ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನೆಗೆ ಮಣಿದ ಪೊಲೀಸರು ಮಂಜುನಾಥ್‌ನನ್ನು ಬಿಟ್ಟಿದ್ದಾರೆ. ಜೊತೆಗೆ ಯುವತಿಯನ್ನೂ ಸಾಂತ್ವನ ಕೇಂದ್ರದಿಂದ ಕರೆಸಿದ್ದಾರೆ. ಅನಂತರ ಪೊಲೀಸ್‌ ಠಾಣೆಯೆ ಎದುರೇ ಇಬ್ಬರಿಗೂ ಮದುವೆ ಮಾಡಿಸಲಾಗಿದೆ.

 

Share Post