CrimeDistricts

ನವವಿವಾಹಿತೆ ಹಾಗೂ ಆಕೆಯ ಪ್ರಿಯಕರ ಆತ್ಮಹತ್ಯೆಗೆ ಶರಣು

ಮೈಸೂರು: ನವ ವಿವಾಹಿತೆ ಹಾಗೂ ಆಕೆಯ ಪ್ರಿಯಕರ ಕೆಆರ್‌ಎಸ್‌ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

    ಮೇಟಗಳ್ಳಿಯ ಬಡವಾಣೆಯ ನಿವಾಸಿಗಳಾದ ನವೀನ್(20) ಮತ್ತು ನಿಸರ್ಗ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ನಿಸರ್ಗ ಮದುವೆಯಾಗಿ 10 ದಿನಗಳಾಗಿತ್ತು. ಸಂಬಂಧಿಕರಾಗಿರುವ ನಿಸರ್ಗ ಮತ್ತು ನವೀನ್, ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಪೋಷಕರಿಗೆ ಈ ವಿಷಯ ತಿಳಿಸಿರಲಿಲ್ಲ.

     ನವೆಂಬರ್ 20ರಂದು ಚಾಮರಾಜನಗರ ಸಮೀಪದ ಗ್ರಾಮದ ಯುವಕನಿಗೆ ನಿಸರ್ಗಳನ್ನು ಕೊಟ್ಟು ಮದುವೆ ಮಾಡಿಕೊಡಲಾಗಿತ್ತು. ಆದರೆ ಡಿಸೆಂಬರ್ 1ರ ಮಧ್ಯಾಹ್ನ ಮನೆಯಿಂದ ಇಬ್ಬರೂ ನಾಪತ್ತೆಯಾಗಿದ್ದರು. ಕೆಆರ್​ಎಸ್​ನ ನಾರ್ತ್ ಬ್ಯಾಂಕ್​ನ ಮಿಲ್ಟ್ರಿ ಕ್ಯಾಂಪ್ ಬಳಿ ಸ್ಕೂಟರ್ ನಿಲ್ಲಿಸಿ, ಇಬ್ಬರೂ ವೇಲ್‌ನಿಂದ ಕಟ್ಟಿಕೊಂಡು ಹಿನ್ನಿರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

Share Post