Districts

ಗುಜರಿ ಅಂಗಡಿಯಲ್ಲಿ ಸಿಲಿಂಡರ್‌ ಸ್ಫೋಟ; ಇಬ್ಬರ ದುರ್ಮರಣ, ಇಬ್ಬರಿಗೆ ಗಾಯ

ಕಾಪು(ಉಡುಪಿ ಜಿಲ್ಲೆ): ಉಡುಪಿ ಜಿಲ್ಲೆಯಲ್ಲಿ ಭೀಕರ ಸಿಲಿಂಡರ್‌ ದುರಂತ ಸಂಭವಿಸಿದೆ. ಗುಜರಿ ಅಂಗಡಿಯಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಸುಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನುಆಸ್ಪತ್ರೆಗೆ ಸೇರಿಸಲಾಗಿದೆ. ಕಾಪು ತಾಲ್ಲೂಕಿನ‌ ಮಲ್ಲಾರು ಫಕೀರನ ಕಟ್ಟೆಯಲ್ಲಿರುವ ಗುಜರಿ ಅಂಗಡಿಯ ಈ ದುರಂತ ನಡೆದಿದೆ. ಮೃತಪಟ್ಟವರನ್ನು ರಜಬ್‌ ಮಲ್ಲಾರು ಹಾಗೂ ರಜಾಖ್ ಚಂದ್ರನಗರ ಎಂದು ಗುರುತಿಸಲಾಗಿದೆ.

 

Share Post