DistrictsPolitics

ಟೆಂಪಲ್‌ ರನ್‌ ಮಾಡುತ್ತಿರುವ ಮಾಡಾಳ್;‌ ಸಂಜೆ ಬೆಂಗಳೂರಿಗೆ ಬರೋ ಸಾಧ್ಯತೆ

ದಾವಣಗೆರೆ; ಮಗನ ಲಂಚ ಸ್ವೀಕಾರ ಪ್ರಕರಣದಲ್ಲಿ ನಿನ್ನೆ ಮಧ್ಯಂತರ ಜಾಮೀನು ಪಡೆದಿರುವ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರು ಇಂದು ಚನ್ನಗಿರಿಯಲ್ಲೇ ಇದ್ದು ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಸಂಜೆ ಅವರು ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ಜಾಮೀನು ನೀಡುವಾಗ ಹೈಕೋರ್ಟ್‌ 48 ಗಂಟೆಗಳ ಒಳಗೆ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಝರಾಗಿ ವಿಚಾರಣೆಗೆ ಸಹಕರಿಸುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಸಂಜೆ ಅವರು ಬೆಂಗಳೂರಿಗೆ ಬಂದು, ನಾಳೆ ಲೋಕಾಯುಕ್ತರ ಮುಂದೆ ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ.

ಮಾಡಾಳ್‌ ಅವರು ವಿಚಾರಣೆಗೆ ಹಾಜರಾಗುವ ಕುರಿತಂತೆ ಈಗಾಗಲೇ ತಮ್ಮ ವಕೀಲರ ಜೊತೆ ಮಾತನಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ವಕೀಲರು ತಿಳಿಸಿದ್ದು, ಅದರಂತೆ ಮಾಡಾಳ್‌ ಅವರು ಸಂಜೆ ಬೆಂಗಳೂರಿಗೆ ಬರಲಿದ್ದಾರೆ. ನಾಳೆ ಬೆಳಗ್ಗೆ ಹನ್ನೊಂದು ಗಂಟೆಯ ನಂತರ ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಕೇಳುವ ಪ್ರಶ್ನೆಗಳಿಗೆ ಶಾಸಕರು ಉತ್ತರಿಸಲಿದ್ದಾರೆ.

Share Post