Districts

ರಾಜ್ಯದೆಲ್ಲೆಡೆ ಶಿವರಾತ್ರಿ ಸಂಭ್ರಮ; ಮಲೆಮಹದೇಶ್ವರನಿಗೆ ಹಣ್ಣು-ತರಕಾರಿ ಅಲಂಕಾರ

ಚಾಮರಾಜನಗರ: ರಾಜ್ಯದೆಲ್ಲಡೆ ಶಿವರಾತ್ರಿ ಹಬ್ಬವನ್ನು ಅದ್ದೂರಿಯಿಂದ ಆಚರಿಸಲಾಗುತ್ತಿದೆ. ಕೊರೊನಾ ಭೀತಿ ಕಡಿಮೆಯಾಗಿರುವುದರಿಂದ ಎಲ್ಲೆಡೆ ಶಿವನ ದೇವಾಲಯಗಳಲ್ಲಿ ಭಕ್ತರು ತುಂಬು ತುಳುಕುತ್ತಿದ್ದಾರೆ. ಅದ್ರಲ್ಲೂ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. 

   ಅದ್ರಲ್ಲೂ ಈ ಬಾರಿ ಮಲೆ ಮಹದೇಶ್ವರನಿಗೆ ವಿಶೇಷ ಅಲಂಕಾರ ಮಾಡಲಾಗಿದೆ.  ದೇಗುಲದ ಪ್ರಾಂಗಣ, ಗರ್ಭಗುಡಿಗೆ ಹಣ್ಣು-ತರಕಾರಿಗಳಿಂದ ಅಲಂಕಾರ ಮಾಡಲಾಗಿದೆ. ಇದು ಭಕ್ತರ ಗಮನ ಸೆಳೆಯುತ್ತಿದೆ. ಮುಸುಕಿನ ಜೋಳ, ಕಬ್ಬು, ಸೇಬು ಸೇರಿದಂತೆ ವಿವಿಧ ಹಣ್ಣು-ತರಕಾರಿಗಳಿಂದ ಮಲೆಮಹದೇಶ್ವರ ದೇವಾಲಯವನ್ನು ಸಿಂಗರಿಸಲಾಗಿದೆ.

Share Post