CrimeDistrictsHealth

ಕಿಡ್ನಿ ವೈಫಲ್ಯ ಹಿನ್ನೆಲೆ ರೈಲಿನಡಿ ಬಿದ್ದು ವ್ಯಕ್ತಿ ಆತ್ಮಹತ್ಯೆ

ಕೋಲಾರ; ಕಿಡ್ನಿ ವೈಫಲ್ಯವಾಗಿ ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿದ್ದ ವ್ಯಕ್ತಿಯೊಬ್ಬ ರೈಲಿನ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಬಂಗಾರಪೇಟೆ ತಾಲ್ಲೂಕಿನ ಹುಣಸನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಅದೇ ಗ್ರಾಮದ ಮುನಿರಾಜು ಅಲಿಯಾಸ್‌ ಪುಟ್ಟಣ್ಣ (56) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. 

ಮುನಿರಾಜು ಅವರು ಮರಗೆಲಸ ಮಾಡುತ್ತಿದ್ದರು. ಅವರಿಗೆ ಕೆಲ ತಿಂಗಳಿಂದ ಅನಾರೋಗ್ಯವಿತ್ತು. ಎರಡೂ ಕಿಡ್ನಿ ವೈಫಲ್ಯವಾಗಿದ್ದರಿಂದ ಅವರು ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿದ್ದರು. ದಿನಕಳೆದಂತೆ ಆರೋಗ್ಯ ಹದಗೆಡುತ್ತಿತ್ತು. ಇದರಿಂದಾಗಿ ಮನನೊಂದ ಅವರು ಚಲಿಸುತ್ತಿದ್ದ ರೈಲಿಗೆ ಅಡ್ಡ ಬಂದು ಸಾವನ್ನಪ್ಪಿದ್ದಾರೆ. ರೈಲು ಡಿಕ್ಕಿ ಹೊಡೆದಿದ್ದರಿಂದ ಅವರ ದೇಹ ಛಿದ್ರ ಛಿದ್ರವಾಗಿದೆ.

 

Share Post