CrimeDistricts

ರಾಮನಗರ ಜಿಲ್ಲೆಯಲ್ಲಿ ಮರ ಬಿದ್ದು ವ್ಯಕ್ತಿ ಸಾವು; ನೀರಿನಲ್ಲಿ ಸಿಲುಕಿದ ವಾಹನಗಳು..!

ರಾಮನಗರ; ರಾಮನಗರ ಜಿಲ್ಲೆಯಲ್ಲಿ ಮಳೆ ಅವಾಂತರಕ್ಕೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಬಿಡದಿ ಹತ್ತಿರದ ತೊರೆದೊಡ್ಡಿ ಬಳಿ ಆಲದ ಮರ ಉರುಳಿಬಿದ್ದಿದ್ದು, ಅದರಡಿ ಸಿಲುಕಿ ಬೋರೇಗೌಡ ಎಂಬುವವರು ಸಾವನ್ನಪ್ಪಿದ್ದಾರೆ.

ರಾತ್ರಿಯಿಡೀ ಭಾರಿ ಮಳೆ ಸುರಿದಿದ್ದು ರಸ್ತೆಗಳೆಲ್ಲಾ ಜಲಾವೃತವಾಗಿವೆ. ತಗ್ಗುಪ್ರದೇಶಗಳಿಗೆಲ್ಲಾ ನೀರು ನುಗ್ಗಿದೆ. ಬೆಂಗಳೂರು ಮೈಸೂರು ರಸ್ತೆಯಲ್ಲಿ ಬಸ್‌ಗಳು, ಕಾರುಗಳು ಸೇರಿ ಅನೇಕ ವಾಹನಗಳು ನೀರಿನಲ್ಲಿ ಸಿಲುಕಿವೆ. ಅವುಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕ್ರೇನ್‌ ಬಳಸಿ ಕಾರುಗಳು ಸೇರಿದಂತೆ ಇತರೆ ವಾಹನಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ.

Share Post