CrimeDistricts

ಪ್ರಭಾವಿ ಪುತ್ರನಿಂದ ಹಲ್ಲೆ; ಗಾಯಗೊಂಡಿದ್ದ ಯುವಕ ಸಾವು

ಹುಬ್ಬಳ್ಳಿ; ಬಾರ್‌ನಲ್ಲಿ ನಡೆದ ಗಲಾಟೆ ವೇಳೆ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಕೆಲ ತಿಂಗಳ ಹಿಂದೆ ಘಂಟಿಕೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ವೇಳೆ ನವೀನ್‌ ಎಂಬಾತ ತೀವ್ರವಾಗಿ ಗಾಯಗೊಂಡಿದ್ದ. ಆತ ಇಂದು ಸಾವನ್ನಪ್ಪಿದ್ದಾನೆ. 

ಮೃತ ನವೀನ್‌ ಮೇಲೆ ಹುಬ್ಬಳ್ಳಿಯ ಪ್ರಭಾವಿಯೊಬ್ಬರ ಪುತ್ರ ಹಲ್ಲೆ ನಡೆಸಿದ್ದ ಎಂದು ತಿಳಿದುಬಂದಿದೆ. ನವೀನ್‌ಗೆ ಇಟ್ಟಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಅಂದಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನವೀನ್‌ ಇಂದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

Share Post