Districts

ಕೆಸರು ಹಾರಿಸಿದ ಬಸ್‌ ಚಾಲಕ; ರೊಚ್ಚಿಗೆದ್ದ ವ್ಯಕ್ತಿಯಿಂದ ಚಪ್ಪಲಿ ಏಟು

ರಾಯಚೂರು: ಬಸ್‌ ಚಾಲಕ ಕೆಸರನ್ನು ಮೈಮೇಲೆ ಹಾರಿಸಿದ್ದಾನೆಂದು ಆಕ್ರೋಶಗೊಂಡ ವ್ಯಕ್ತಿಯೊಬ್ಬ ಬಸ್‌ ಚಾಲಕನಿಗೆ ಚಪ್ಪಲಿಯಿಂದ ದಾಳಿ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನ ಪರಸಾಪುರ ಬಳಿ ನಡೆದಿದೆ. 

 

ಪರಸಾಪುರ ಬಳಿ ಬಸ್ ಚಾಲಕ ಕೆಸರಿದ್ದ ರಸ್ತೆ ಮೇಲೆ ಬಸ್ ಚಲಾಯಿಸಿದ್ದಾರೆ. ಈ ವೇಳೆ ಅಲ್ಲೇ ಇದ್ದ ಪಿ.ಗೌಡರ ಎಂಬುವವರ ಮೇಲೆ ಕೆಸರು ಹಾರಿದೆ. ಇದರಿಂದ ಸಿಟ್ಟಿಗೆದ್ದ ಗೌಡ, ಚಾಲಕನೊಂದಿಗೆ ಜಗಳಕ್ಕಿಳಿದಿದ್ದಾನೆ. ಅದು ತಾರಕಕ್ಕೇರಿ ಪಿ.ಗೌಡರ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದಾನೆ. ರಾಯಚೂರು ವಿಭಾಗದ ಮಸ್ಕಿ ಘಟಕದ  ಸರ್ಕಾರಿ ಬಸ್‌ ಇದಾಗಿದ್ದು, ಸಾರ್ವಜನಿಕರ ಎದುರೇ ಚಪ್ಪಲಿಯಿಂದ ಚಾಲಕನ ಮೇಲೆ ಹಲ್ಲೆ ನಡೆದಿದೆ.

ಘಟನೆಯಿಂದ ಅವಮಾನಿತನಾದ ಬಸ್ ಚಾಲಕ ಮಸ್ಕಿ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದರು. ಆದರೆ ಪೊಲೀಸರು ಇಬ್ಬರಿಗೂ ರಾಜಿ ಮಾಡಿಸಿ ದೂರು ದಾಖಲಿಸಿಕೊಂಡಿಲ್ಲ. ಇದರಿಂದ ಚಾಲಕ ಬೇಸರ ವ್ಯಕ್ತಪಡಿಸಿದ್ದಾರೆ.

 

Share Post