CrimeDistrictsPolitics

ಶಾಸಕರ ಮನೆ ಮುಂದೆ ಆತ್ಮಹತ್ಯೆಗೆ ನಿರ್ಧರಿಸಿದ್ದಾತ ಪೊಲೀಸ್‌ ವಶಕ್ಕೆ

ಬೆಳಗಾವಿ; ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ ಕಾರಣಕ್ಕಾಗಿ ಶಾಸಕ ರಾಜು ಕಾಗೆ ನನಗೆ ಕಿರುಕುಳ ನೀಡುತ್ತಿದ್ದಾರೆ. ಹೀಗಾಗಿ ಶಾಸಕರ ಮನೆ ಬಳಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಗ್ರಾಪಂ ಸದಸ್ಯರೊಬ್ಬರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆ ಕಾಗವಾಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಅವರ ವಿರುದ್ಧ ಶಿರಗುಪ್ಪಿ ಗ್ರಾ.ಪಂ ಸದಸ್ಯ ರಾಮನಗೌಡ ಪಾಟೀಲ್ ಆರೋಪ ಮಾಡಿದ್ದರು. ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯೊಡ್ಡಿದ್ದರು. ಹೀಗಾಗಿ ಅವರ ನಿವಾಸಕ್ಕೆ ಬಂದ ಪೊಲೀಸರು ವಿಚಾರಣೆಗಾಗಿ ಆತನನ್ನು ಕರೆದುಕೊಂಡು ಹೋಗಿದ್ದಾರೆ. ಇದಕ್ಕೂ ಮೊದಲು ರಾಮನಗೌಡ ಅವರು ಶಿರಗುಪ್ಪಿ ಗ್ರಾ.ಪಂ. ಕಚೇರಿಯಲ್ಲಿ ಕುಳಿತು ಶಾಸಕರಿಗೆ ಕರೆ ಮಾಡಿ ಆತ್ಮಹತ್ಯೆ‌ ಮಾಡಿಕೊಳ್ತೀನಿ. ಹೆಂಡತಿ, ಮಕ್ಕಳ ಸಮೇತ ಬಂದು ನಿಮ್ಮ ಮನೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿದ್ದ.

Share Post