Districts

10 ಸಾವಿರ ರೂಪಾಯಿ ಲಂಚ; ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿ

ಮಂಡ್ಯ: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಹತ್ತು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸರ್ವೇ ಅಧಿಕಾರಿಗಳನ್ನು ಎಸಿಬಿ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ಸರ್ವೇ ಸೂಪರ್‌ವೈಸರ್‌ ಲೋಕೇಶ್‌ ಬಲೆಗೆ ಬಿದ್ದ ಅಧಿಕಾರಿ. ಶ್ರೀರಂಗಪಟ್ಟಣದ ಮಿನಿ ವಿಧಾನಸೌಧದ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ರೆಡ್‌ಹ್ಯಾಂಡಾಗಿ ಹಿಡಿದಿದ್ದಾರೆ.

ಲೋಕೇಶ್‌ ಅವರು ರೈತರೊಬ್ಬರಿಗೆ 15 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು. ಈ ಮೊದಲೇ ಮೂರು ಸಾವಿರ ರೂಪಾಯಿ ಪಡೆದಿದ್ದರು. ಉಳಿದ ಹಣ ನೀಡುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

Share Post