CrimeDistricts

ಟೈಮರ್‌ ಬಳಸಿ ಸ್ಪೋಟಕ್ಕೆ ಸಂಚು; ತೀವ್ರಗೊಂಡ ತನಿಖೆ

ಮಂಗಳೂರು; ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿರುವಾಗಲೇ ಬಾಂಬ್‌ ಸ್ಫೋಟಿಸಲು ಪ್ಲ್ಯಾನ್‌ ಮಾಡಲಾಗಿತ್ತು ಎಂಬ ಮಾಹಿತಿ ಹೊರಬಿದ್ದಿದೆ. ಉಗ್ರರ ಸಂಚಿನ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಆರೋಪಿ ತೀವ್ರವಾಗಿ ಗಾಯಗೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆದ್ರೆ ಆರೋಪಿ ಪೊಲೀಸರು ಏನು ಕೇಳಿದರೂ ಉತ್ತರ ನೀಡುತ್ತಿಲ್ಲ ಎಂದು ಗೊತ್ತಾಗಿದೆ. ಟೈಮರ್‌ ಬಾಂಬ್‌ ಮೂಲಕ ಜನನಿಬಿಡ ಪ್ರದೇಶದಲ್ಲಿ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.

ಪಂಪ್‌ವೆಲ್ ವೃತ್ತದ ಬಳಿ ಈ ಕುಕ್ಕರ್ ಬಾಂಬ್ ಸ್ಫೋಟಿಸಲು ಸಂಚು ನಡೆದಿತ್ತು ಎಂದು ಹೇಳಲಾಗುತ್ತಿದೆ. ಇಲ್ಲಿ ಹಾಸನ, ಪುತ್ತೂರು ಕಡೆಗೆ ಬಸ್‌ಗಳು ಹೋಗುತ್ತವೆ. ಹೀಗಾಗಿ ಇಲ್ಲಿ ಜನ ಹೆಚ್ಚಿರುತ್ತಾರೆ. ಇದನ್ನೇ ಟಾರ್ಗೆಟ್‌ ಮಾಡಿದ್ದರು ಎನ್ನಲಾಗುತ್ತಿದೆ. ಬ್ಯಾಟರಿ, ವಯರ್, ನಟ್, ಬೋಲ್ಟ್, ಸರ್ಕ್ಯೂಟ್ ರೀತಿಯ ವಸ್ತುಗಳು ಕುಕ್ಕರ್‌ನಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಇದೊಂದು ಟೈಮರ್ ಬಾಂಬ್ ಎನ್ನುವುದು ಪ್ರಾಥಮಿಕ ಮಾಹಿತಿ.

 

Share Post