CrimeDistricts

ಸ್ಫೋಟ ಪ್ರಕರಣ; ಕೇಂದ್ರ ಭದ್ರತಾ ಪಡೆಯ ನೆರವು – ಆರಗ ಜ್ಞಾನೇಂದ್ರ

ಬೆಂಗಳೂರು; ಮಂಗಳೂರು ಆಟೋದಲ್ಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಇದೊಂದು ದೊಡ್ಡ ಮಟ್ಟದ ಸಂಚು ಎಂದು ಮೇಲೋಟಕ್ಕೆ ಕಂಡುಬರ್ತಾ ಇದೆ. ಈ ಬಗ್ಗೆ ತನಿಖೆ ತೀವ್ರಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸ್ಫೋಟದ ಹಿಂದೆ ಉಗ್ರರ ಕೈವಾಡ ಇರುವ ಶಂಕೆ ಇರುವುದರಿಂದ ಕೇಂದ್ರ ಭದ್ರತಾ ಪಡೆಯ ನೆರವು ಪಡೆಯುತ್ತಿದ್ದೇವೆ. ರಾಜ್ಯ ಪೊಲೀಸರು ಹಾಗೂ ಕೇಂದ್ರ ಭದ್ರತಾ ಪಡೆ ಜಂಟಿ ತನಿಖೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ. ಇನ್ನು ಒಂದೆರಡು ದಿನಗಳಲ್ಲಿ ಜನ ವಿಚಾರ ಗೊತ್ತಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 

Share Post