CrimeDistricts

ಸ್ಫೋಟದ ಸ್ಥಳಕ್ಕೆ ಗೃಹಸಚಿವ ಆರಗ ಜ್ಞಾನೇಂದ್ರ ಭೇಟಿ; ಅಧಿಕಾರಿಗಳಿಂದ ಮಾಹಿತಿ ಸಂಗ್ರಹ

ಮಂಗಳೂರು; ಮಂಗಳೂರಿನಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟದ ಸ್ಥಳಕ್ಕೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಂಗಳೂರು ಪೊಲೀಸ್‌ ಅಧಿಕಾರಿಗಳು ಹಾಜರಿದ್ದರು. ಪೊಲೀಸರಿಂದ ಘಟನೆಯ ಬಗ್ಗೆ ಹಾಗೂ ತನಿಖೆಯ ಬಗ್ಗೆ ಗೃಹಸಚಿವರು ಮಾಹಿತಿ ಪಡೆದುಕೊಂಡರು.

ಶಂಕಿತ ಉಗ್ರ ಮಹಮ್ಮದ್ ಶಾರೀಖ್‌ ಹಾಗೂ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆರಗ ಜ್ಞಾನೇಂದ್ರ ಅವರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಈ ವೇಳೆ ಡಿಜಿಪಿ ಮತ್ತು ಐಜಿಪಿ ಪ್ರವೀಣ್ ಸೂದ್, ಜಿಲ್ಲಾಧಿಕಾರಿ ರವಿಕುಮಾರ್, ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ ಮುಂತಾದವರು ಹಾಜರಿದ್ದರು. ಇಂದು ಗೃಹಸಚಿವರು ಉನ್ನರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಭಯೋತ್ಪಾದಕ ಕೃತ್ಯದ ಕುರಿತು ಮತ್ತಷ್ಟು ಮಾಹಿತಿ ಪಡೆಯಲಿದ್ದಾರೆ.

Share Post