CrimeDistricts

ಕುಕ್ಕರ್‌ ಬ್ಲಾಸ್ಟ್‌ ಪ್ರಕರಣ; ತಮಿಳುನಾಡು, ಕೇರಳದಲ್ಲೂ ತನಿಖೆ – ಪ್ರವೀಣ್‌ ಸೂದ್‌

ಮಂಗಳೂರು; ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಕೂಡಾ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದರ ಹಿಂದೆ ಯಾರೆಲ್ಲಾ ಇದ್ದಾರೆ..? ಇದರಲ್ಲಿ ಯಾರ ಕೈವಾಡ ಇದೆ ಎಂಬುದರ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.

ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಾತನಾಡಿದ ಪ್ರವೀಣ್‌ ಸೂದ್‌ ಅವರು, ಶಂಕಿತ ಉಗ್ರ ಶಾರೀಖ್‌ ಮಂಗಳೂರಿನಲ್ಲಿ ಬಾಂಬ್‌ ಸ್ಫೋಟ ನಡೆಸಲು ಆತನಿಗೆ ಎಲ್ಲಿಂದ ಹಣ ಬಂತು. ಆತನಿಗೆ ಸಹಾಯ ಮಾಡುತ್ತಿದ್ದವರು ಯಾರು..? ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಈಗಾಗಲೇ ಒಂದಷ್ಟು ಮಾಹಿತಿಗಳು ಸಿಕ್ಕಿವೆ. ಆದ್ರೆ ಈಗಲೇ ಎಲ್ಲವನ್ನೂ ಬಹಿರಂಗ ಮಾಡೋದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಎನ್‌ಐಎ ಮತ್ತು ಕೇಂದ್ರದ ತನಿಖಾ ಸಂಸ್ಥೆಗಳು ನಮ್ಮ ಜೊತೆ ತನಿಖೆ ಮಾಡುತ್ತಿವೆ. ಸದ್ಯದಲ್ಲೇ ಈ ಪ್ರಕರಣ ಸಂಪೂರ್ಣವಾಗಿ ಎನ್‌ಐಎಗೆ ಹಸ್ತಾಂತರವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಪ್ರವೀಣ್‌ ಸೂದ್‌ ಹೇಳಿದರು.

Share Post