CrimeDistricts

ಮತ್ತೆ ಎಂಇಎಸ್‌ ಕ್ಯಾತೆ; ನಾಡದ್ರೋಹಿ ಘೋಷಣೆ ಕೂಗಿದ ಮುಖಂಡರು

ಬೆಳಗಾವಿ; ಬೆಳಗಾವಿ ಅಧಿವೇಶನಕ್ಕೆ ಪತಿಯಾಗಿ ಎಂಇಎಸ್‌ ಮುಖಂಡು ಮಹಾಮೇಳಾವ್‌ ನಡೆಸಲು ಹೋಗಿ ಸಾಧ್ಯವಾಗದೇ ಹಿಂತಿರುಗಿದ್ದರು. ಇದೀಗ ಅವರು ಮತ್ತೆ ಕ್ಯಾತೆ ಮುಂದುವರೆಸಿದ್ದಾರೆ. ಮಹಾರಾಷ್ಟ್ರಕ್ಕೆ ತೆರಳಿರುವ ಕೆಲ ಎಂಇಎಸ್‌ ಮುಖಂಡರು ನಾಡದ್ರೋಹಿ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದಾರೆ.

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದವನ್ನೇ ರಾಜಕೀಯ ಬಳಸಿಕೊಳ್ಳುತ್ತಿರುವ ಎಂಇಎಸ್‌, ಕೊಲ್ಲಾಪುರದಲ್ಲಿ ಸಭೆ ಸೇರಿ ಮತ್ತೆ ಕ್ಯಾತೆ ತೆಗೆದಿದೆ. ಇತ್ತ ಮಹಾವಿಕಾಸ್ ಆಘಾಡಿ ಸಭೆಯಲ್ಲಿ ಬೆಳಗಾವಿಯ ಎಂಇಎಸ್ ನಾಯಕರು ಭಾಗಿಯಾಗಿದ್ದು ಬೈಕ್ ರ‍್ಯಾಲಿ ಮೂಲಕ ಬೆಳಗಾವಿಯಿಂದ ಕೊಲ್ಲಾಪುರಕ್ಕೆ ತೆರಳಲು ಎಂಇಎಸ್ ಸದಸ್ಯರು ತೀರ್ಮಾನ ಮಾಡಿದ್ದಾರೆ.

ಡಿ. 26ರಂದು ಬೆಳಗಾವಿಯಿಂದ ಕೊಲ್ಲಾಪುರಕ್ಕೆ ತೆರಳಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದು, ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಟೋಲ್‌ಗೇಟ್‌ನಿಂದ ಬೈಕ್ ರ‍್ಯಾಲಿಗೆ ಎಂಇಎಸ್ ಸದಸ್ಯರು ತೀರ್ಮಾನಿಸಿದ್ದಾರೆ. ಕೊಗನೊಳ್ಳಿ ಟೋಲ್‌ಗೇಟ್ ಬಳಿ ಎಂಇಎಸ್ ಕಾರ್ಯಕರ್ತರನ್ನು ಮಹಾವಿಕಾಸ್ ಆಘಾಡಿ ಮೈತ್ರಿಕೂಟ ಪಕ್ಷಗಳಾದ ಎಂಇಎಸ್‌ಗೆ ಶಿವಸೇನೆ ಉದ್ಧವ್ ಠಾಕ್ರೆ ಬಣ, ಎನ್‌ಸಿಪಿ, ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತ ಮಾಡಿಕೊಳ್ಳಲಿದ್ದಾರೆ.

Share Post