DistrictsPolitics

ಡಿ.25ಕ್ಕೆ ಜನಾರ್ದನರೆಡ್ಡಿ ಹೊಸ ಪಕ್ಷ ಘೋಷಣೆ..?; ಕುತೂಹಲ ಸೃಷ್ಟಿಸಿದ ನಡೆ

ಕೊಪ್ಪಳ; ಮಾಜಿ ಸಚಿವ ಜನಾರ್ದನರೆಡ್ಡಿ ಹೊಸ ಪಕ್ಷ ಕಟ್ಟುತ್ತಾರೆ ಎಂಬ ಮಾತುಗಳು ಕೆಲ ದಿನಗಳಿಂದ ಕೇಳಿಬರುತ್ತಿವೆ. ಈ ನಡುವೆ ಜನಾರ್ದನರೆಡ್ಡಿಯವರು ಕೊಪ್ಪಳದಲ್ಲಿ ಮನೆ ಮಾಡಿ ತಮ್ಮ ರಾಜಕೀಯ ತಂತ್ರಗಾರಿಕೆ ಶುರು ಮಾಡಿದ್ದಾರೆ. ಇತ್ತ ಅವರು ಇದೇ ಡಿಸೆಂಬರ್‌ 25ರಂದು ಹೊಸ ಪಕ್ಷ ಘೋಷಣೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. 

ಇದಕ್ಕೆ ಪುಷ್ಠಿ ಎಂಬಂತೆ ಅವರು ಸಾಮಾಜಿಕ ಜಾಲತಾಣದಲ್ಲಿ ಮುಂದಿನ ವಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಡಿಸೆಂಬರ್‌ 25ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ಅಂದು ಜನಾರ್ದನರೆಡ್ಡಿಯವರು ಹೊಸ ಪಕ್ಷದ ಬಗ್ಗೆ ತಮ್ಮ ನಿಲುವನ್ನು ತಿಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Share Post