Districts

ಸಿದ್ದಗಂಗಾ ಮಠಕ್ಕೆ ಭೇಟಿ ನಂತರ ಈಶ್ವರಪ್ಪ ರಾಜೀನಾಮೆ

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ರಾಜೀನಾಮೆ ದಿನವೂ ಫುಲ್‌ ಬ್ಯುಸಿಯಾಗಿದ್ದಾರೆ.  ಇಂದು ಬೆಳಗ್ಗೆಯೇ ಜನರಿಂದ ಅಹವಾಲು ಸ್ವೀಕರಿಸಿದ ಅವರು, ನಂತರ ಗೋಪೂಜೆ ನೆರವೇರಿಸಿ, ತಿಂಡಿ ಸೇವನೆ ಮಾಡಿದರು.

  ಅನಂತರ ಅವರು ಕನಕದಾಸ ಸೇವಾ ಟ್ರಸ್ಟ್​ನಿಂದ ನಿರ್ಮಾಣವಾಗಿರುವ ಶುಭಶ್ರೀ ಸಮುದಾಯ ಭವನ ಲೋಕಾರ್ಪಣೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಸದ್ಯದಲ್ಲೇ ಅವರು ಬೆಂಗಳೂರಿನತ್ತ ಹೊರಡಲಿದ್ದಾರೆ. ಬೆಂಗಳೂರಿಗೆ ಬರುವ ಮೊದಲು ತುಮಕೂರಿನ ಸಿದ್ದಗಂಗಾ ಮಠಕ್ಕೆ ಅವರು ಭೇಟಿ ನೀಡಲಿದ್ದಾರೆ. ಅಲ್ಲಿ ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದು ನಂತರ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಸಂಜೆ ಸಚಿವ ಈಶ್ವರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಲಿದ್ದಾರೆ. ಅವರ ಜೊತೆ ಕೆಲಹೊತ್ತು ಚರ್ಚೆ ನಡೆಸಿ, ಅನಂತರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಅನಂತರ ಅವರು ರೈಲಿನಲ್ಲಿ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Share Post