DistrictsPolitics

ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಕನವರಿಕೆ; ಅವರಪ್ಪರಾಣೆ ಅಧಿಕಾರಕ್ಕೆ ಬರಲ್ಲ ಎಂದ ಸಚಿವ ಸುಧಾಕರ್‌

ದೇವನಹಳ್ಳಿ; ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಹಲವು ತಿಂಗಳು ಬಾಕಿ ಇದೆ. ಆದ್ರೆ ಆಗಲೇ ಕಾಂಗ್ರೆಸ್‌ ನಾಯಕರಲ್ಲಿ ಸಿಎಂ ಸ್ಥಾನದ ವಿಚಾರವಾಗಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಡಾ.ಕೆ.ಸುಧಾಕರ್‌, ಕಾಂಗ್ರೆಸ್‌ ನಾಯಕರನ್ನು ಲೇವಡಿ ಮಾಡಿದ್ದಾರೆ.

ಇನ್ನೂ ಮಗೂನೇ ಹುಟ್ಟಿಲ್ಲ. ಆಗಲೇ ಕಾಂಗ್ರೆಸ್‌ ನಾಯಕರು ಕಿತ್ತಾಡುತ್ತಿದ್ದಾರೆ. ಅವರಿಗೆ ಯಾವ ಶಾಸ್ತ್ರದವರು ಹೇಳಿದರೋ ಏನೋ, ಅಧಿಕಾರಕ್ಕೆ ಬರುತ್ತೀರಿ ಎಂದು. ಆಗಲೇ ಕನಸು ಕಾಣುತ್ತಿದ್ದಾರೆ. ಆದ್ರೆ ರಾಜ್ಯದಲ್ಲಿ ಅವರಪ್ಪರಾಣೆಗೂ ಕಾಂಗ್ರೆಸ್‌ನವರು ಅಧಿಕಾರಕ್ಕೆ ಬರೋದಿಲ್ಲ ಎಂದು ಸಚಿವ ಸುಧಾಕರ್‌ ಲೇವಡಿ ಮಾಡಿದ್ದಾರೆ.

Share Post