Districts

ವಿಜಯೇಂದ್ರಗೆ ಸಚಿವ ಸ್ಥಾನ ಕೊಟ್ಟರೆ ಸ್ವಾಗತಿಸುತ್ತೇನೆ; ಸಚಿವ ಉಮೇಶ್‌ ಕತ್ತಿ

ಚಾಮರಾಜನಗರ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಿ, ಯಡಿಯೂರಪ್ಪ ಮಗ ಬಿ.ವೈ.ವಿಜಯೇಂದ್ರಗೆ ಸಚಿವ ಕೊಟ್ಟರೆ ಸಂತೋಷ ಎಂದು ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಮ್ಮ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದರು.

  ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಮಾಧ್ಯಮವದರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಮಾಡಿ ಹಿರಿಯ ಕೊಕ್‌ ಕೊಟ್ಟರೂ ತೊಂದರೆ ಇಲ್ಲ, ವಿಜಯೇಂದ್ರಗೆ ಸಚಿವ ಸ್ಥಾನ ಕೊಟ್ಟರೂ ಪರವಾಗಿಲ್ಲ. ಎರಡನ್ನೂ ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು. ಹಿರಿಯರು ಪಕ್ಷ ಸಂಘಟನೆ ಮಾಡಬೇಕು. ನಾನು 9 ಬಾರಿ ಶಾಸಕನಾಗಿದ್ದೇನೆ. ಹಿರಿಯರಿಗೆ ಕೊಕ್ ಕೊಟ್ಟು ಅವರನ್ನು ಪಕ್ಷ ಸಂಘಟನೆಗೆ ನಿಯೋಜಿಸಿದರೆ ಅದನ್ನೂ ಸ್ವಾಗತಿಸುತ್ತೇನೆ ಎಂದು ಕತ್ತಿ ಹೇಳಿದರು.

Share Post