Districts

ನಮ್ಮಪ್ಪರಾಣೆ ಮೇಕೆದಾಟು ಯೋಜನೆ ಮಾಡ್ತೀವಿ; ಸಚಿವ ವಿ.ಸೋಮಣ್ಣ

ತುಮಕೂರು: ನಮ್ಮಪ್ಪರಾಣೆ ಮೇಕೆದಾಟು ಯೋಜನೆ ಮಾಡೇಮಾಡ್ತೀವಿ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ಮೇಕೆದಾಟು ಯೋಜನೆಗೆ ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರ ಕೂಡಾ ಇದಕ್ಕೆ ಅನುಮೋದನೆ ನೀಡಿದೆ ಎಂದು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಭ್ರವಾಗಿವೆ. ಇದರಲ್ಲಿ ಯಾವುದೇ ಅನುಮಾನ ಪಡುವ ಅಗತ್ಯವೇ ಬರುವುದಿಲ್ಲ. ಕೆಲ ಶಾಸಕರ ಹೇಳಿಕೆಗಳಿಗೆ ಗಮನ ಕೊಡೋ ಅವಶ್ಯಕತೆ ಇರುವುದಿಲ್ಲ. ಬೆಳಗ್ಗೆ ಒಂದು, ಸಂಜೆ ಒಂದು ಹೇಳಿಕೆ ನೀಡುತ್ತಿರುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ವಸತಿ ಸಚಿವ ವಿ.ಸೋಮಣ್ಣ ಉತ್ತರಿಸಿದರು.

Share Post