DistrictsPolitics

ಸ್ವಗ್ರಾಮದಲ್ಲೇ ಶಾಸಕ ಅಜಯ್‌ ಸಿಂಗ್‌ಗೆ ತೀವ್ರ ತರಾಟೆ; ಮರಳು ದಂದೆ ತಡೆಗೆ ಆಗ್ರಹ

ಕಲಬುರಗಿ; ಮಾಜಿ ಸಿಎಂ ಧರಂಸಿಂಗ್‌ ಪುತ್ರ ಶಾಸಕ ಅಜಯ್‌ ಸಿಂಗ್‌ಗೆ ತವರೂರಿನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ಶಾಸಕರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

ನೆಲೋಗಿ ಗ್ರಾಮದ ಬಳಿ ಭೀಮಾ ನದಿ ಹರಿಯುತ್ತೆ. ಅಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ. ಅದನ್ನು ನಿಲ್ಲಿಸುವಂತೆ ಗ್ರಾಮಸ್ಥರು ಹಲವು ಬಾರಿ ಶಾಸಕರನ್ನು ಆಗ್ರಹಿಸಿದ್ದರು. ಆದ್ರೆ ಪ್ರಯೋಜನವಾಗಿಲ್ಲ. ಹೀಗಾಗಿ, ರಸ್ತೆಗೆ ಕಲ್ಲು ಅಡ್ಡ ಹಾಕಿ ಶಾಸಕರ ಕಾರು ತಡೆದಿದ್ದಾರೆ. ಶಾಸಕರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಅಜಯ್‌ ಸಿಂಗ್‌ಗೆ ಸ್ವಗ್ರಾಮದಲ್ಲೇ ಮುಜುಗರವಾಗಿದೆ.

ನಮಗೆ ಮನೆಕಟ್ಟಲು ಮರಳು ಕೊಡುತ್ತಿಲ್ಲ. ಬೇರೆಯವರು ಬಂದು ಇಲ್ಲಿ ಮರಳು ದಂಧೆ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮಸ್ಥರು ಶಾಸಕ ಅಜಯ್‌ ಸಿಂಗ್‌ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Share Post