DistrictsPolitics

ಸರ್ಕಾರಕ್ಕೆ ಶಾಸಕ ಬಿ.ಆರ್‌.ಪಾಟೀಲ್‌ ಪತ್ರ; ಅಧಿವೇಶನಕ್ಕೂ ಬರಲ್ಲವೆಂದ ಶಾಸಕ

ಕಲಬುರಗಿ; ಕಾಮಗಾರಿ ಸಂಬಂಧ ಸಚಿವ ಕೃಷ್ಣಬೈರೇಗೌಡ ಅವರು ನನ್ನ ವಿರುದ್ಧ ಆರೋಪ ಮಾಡುವ ರೀತಿ ಮಾತನಾಡಿದ್ದಾರೆ. ಹೀಗಾಗಿ ನನ್ನ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ. ಅಲ್ಲಿಯವರೆಗೂ ನಾನು ಸದನಕ್ಕೆ ಹೋಗೋದಿಲ್ಲ ಎಂದು ಆಳಂದ ಶಾಸಕ ಬಿ.ಆರ್‌.ಪಾಟೀಲ್‌ ಹೇಳಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿರುವ ಅವರು, ಕಲಬುರಗಿಯಲ್ಲಿ ಮಾತನಾಡಿ ಸರ್ಕಾರಕ್ಕೆ ಪತ್ರ ಬರೆದ ಬಗ್ಗೆ ಮಾಹಿತಿ ನೀಡಿದ್ದಾರೆ. 

ಸಚಿವರು ನನ್ನ ವಿರುದ್ಧ ಆರೋಪದ ರೀತಿಯಲ್ಲಿ ಮಾತನಾಡಿದ್ದಾರೆ. ಹೀಗಾಗಿ, ಆ ಬಗ್ಗೆ ಸೂಕ್ತ ತನಿಖೆಯಾಗಬೇಕು. ಅಲ್ಲಿಯವರೆಗೂ ನಾನು ಬೆಳಗಾವಿ ಅಧಿವೇಶನಕ್ಕೂ ಹೋಗಲ್ಲ ಎಂದು ಬಿ.ಆರ್‌.ಪಾಟೀಲ್‌ ಹೇಳಿದ್ದಾರೆ. ನಾನು ಸ್ವಾಭಿಮಾನದಿಂದ ಬದುಕಿದ್ದೇನೆ. ಈ ಬಗ್ಗೆ ಸಿಎಂಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಮುಖ್ಯಮಂತ್ರಿಗಳು ಇವತ್ತು ಸಭೆ ಕರೆದಿದಾರೆ. ಮಧ್ಯಾಹ್ನ ಮತ್ತೆ ನಾನು ಬೆಂಗಳೂರಿಗೆ ಹೋಗುತ್ತೇನೆ ಎಂದು ಶಾಸಕ ಬಿ.ಆರ್‌.ಪಾಟೀಲ್‌ ಹೇಳಿದ್ದಾರೆ.

 

 

Share Post