Districts

ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ; ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ: ನಾನು ಶಾಸಕನಾಗಿ ನನ್ನ ಕ್ಷೇತ್ರ ಹೊನ್ನಾಳಿಗೆ ಸಮರ್ಪಿಸಿಕೊಂಡಿದ್ದೇನೆ. ನನಗೆ ಸಚಿವ ಸ್ಥಾನ ಕೊಟ್ಟರೆ ರಾಜ್ಯಕ್ಕೆ ನನ್ನನ್ನು ಸಮರ್ಪಿಸಿಕೊಳ್ಳುತ್ತೇನೆ. ಕೊಟ್ಟ ಜವಾಬ್ದಾರಿಯನ್ನು ಸೂಕ್ತವಾಗಿ ನಿಭಾಯಿಸುತ್ತೇನೆ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ. ಶಾಸಕನಾಗಿ ನಾನು ನನ್ನ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸುತ್ತಿದ್ದೇನೆ. ಸಚಿವ ಸ್ಥಾನ ಸಿಕ್ಕರೆ ಜನಸೇವೆ ಮಾಡಲು ಇನ್ನಷ್ಟು ಅನುಕೂಲವಾಗುತ್ತದೆ ಎಂದು ರೇಣುಕಾಚಾರ್ಯ ಹೇಳಿದರು.

ರಾತ್ರಿ 10 ಗಂಟೆಗೆ ದೆಹಲಿಗೆ ಹೋಗುತ್ತೇನೆ. ನಾಳೆ ಮತ್ತು ನಾಡಿದ್ದು ವರಿಷ್ಠ ನಾಯಕರನ್ನು ಭೇಟಿಯಾಗುತ್ತೇನೆ. ಸಂಪುಟ ವಿಸ್ತರಣೆ ಹಾಗೂ ಹಾಲಿ ಇರುವ ಸಚಿವರ ಕಾರ್ಯವೈಖರಿ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ರೇಣುಕಾಚಾರ್ಯ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

Share Post