DistrictsPolitics

ಮೋದಿ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಿದೆ; ಕೇಂದ್ರ ಸಚಿವೆ ಸ್ಮೃತಿ ಇರಾನಿ

ದೊಡ್ಡಬಳ್ಳಾಪುರ; ಕಾಂಗ್ರೆಸ್‌ ರಾಷ್ಟ್ರವನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ. ಭಾರತ ಮಾತೆಯನ್ನು ರಾಹುಲ್‌ ಗಾಂಧಿ ಅವಮಾನಿಸಿದ್ದರು. ಈಗ ಅವರು ಭಾರತ್‌ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ನಾವು ಅವರನ್ನು ಕೇಳಲು ಬಯಸುತ್ತೇನೆ. ದೇಶವನ್ನು ಇಬ್ಬಾಗ ಮಾಡಿದ್ದು ಯಾರು ಎಂದು ಮೊದಲು ಹೇಳಲಿ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಗ್ರಹಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಮೊದಲಿಗೆ ಕನ್ನಡದಲ್ಲೇ ಭಾಷಣ ಆರಂಭಿಸಿದರು. ಅನಂತರ ಕಾಂಗ್ರೆಸ್‌ ಪಕ್ಷ ಹಾಗೂ ಗಾಂಧಿ ಕುಟುಂಬದ ವಿರುದ್ಧ ಹರಿಹಾಯ್ದರು. ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆಯಾಗಿದೆ. ಈ ಮೂಲಕ ಭಯೋತ್ಪಾದನೆ ಹರಡಲು ಯತ್ನಿಸಲಾಗುತ್ತಿದೆ ಎಂದು ಸ್ಮೃತಿ ಇರಾನಿ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರದ ಹಿತಕ್ಕಾಗಿ ಗಾಂಧಿ ಕುಟುಂಬ ಏನನ್ನೂ ಮಾಡಿಲ್ಲ ಎಂದ ಸ್ಮೃತಿ ಇರಾನಿ, ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಕರ್ನಾಟಕಕ್ಕೆ ಏನೂ ಮಾಡಿಲ್ಲ. ಮೋದಿ ಸರ್ಕಾರ ಕರ್ನಾಟಕದ ಅಭಿವೃದ್ಧಿ ಮಾಡುತ್ತಿದೆ ಎಂದು ಹೇಳಿದರು.

ಬೊಮ್ಮಾಯಿ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡುತ್ತಿವೆ. ಹೀಗಾಗಿ ಮುಂದಿನ ಚುನಾವಣೆಯಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಸ್ಮೃತಿ ಇರಾನಿ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

Share Post