CrimeDistricts

ರಾತ್ರಿ ಊಟದ ವಿಚಾರಕ್ಕೆ ಜಗಳ – ತಾಯಿ, ಮಗ ಆತ್ಮಹತ್ಯೆ

ರಾಮನಗರ; ಊಟದ ವಿಚಾರಕ್ಕೆ ಜಗಳ ಮಾಡಿಕೊಂಡು ತಾಯಿ-ಮಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಕುಮಾರಸ್ವಾಮಿ ಲೇಔಟ್‌ನಲ್ಲಿ ನಡೆದಿದೆ. ಕಳೆದ ರಾತ್ರಿ ಅಡುಗೆ ವಿಚಾರದಲ್ಲಿ ಈ ಜಗಳ ನಡೆದಿದ್ದು, ತಾಯಿ ಸಂಪಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿ ಸಾವಿಗೆ ನಾನೇ ಕಾರಣನಾದೆ ಎಂದು ಮನನೊಂದು ಮಗ ನೇಣಿಗೆ ಶರಣಾಗಿದ್ದಾನೆ.

ವಿಜಯಲಕ್ಷ್ಮೀ ಹಾಗೂ ಹರ್ಷ ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಊಟದ ವಿಚಾರವಾಗಿ ಹರ್ಷ ತನ್ನ ತಾಯಿ ವಿಜಯಲಕ್ಷ್ಮೀ ಜೊತೆ ಜೋರು ಜಗಳ ಮಾಡಿದ್ದಾನೆ. ಇದ್ರಿಂದ ಮನನೊಂದ ವಿಜಯಲಕ್ಷ್ಮೀ ಮನೆಯ ಮುಂದಿನ ಸಂಪಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಆದ್ರೆ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯ್ತಾದರೂ, ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದರು. ಈ ವಿಷಯ ತಿಳಿದ ಮಗ ಹರ್ಷ ತಾಯಿಯ ಸಾವಿಗೆ ಕಾರಣನಾದೆ ಎಂದು ಮನನೊಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post