DistrictsPolitics

ಕೋಲಾರದಲ್ಲಿ ವೇದಿಕೆಯಲ್ಲೇ ಸಂಸದ-ಶಾಸಕ ಜಟಾಪಟಿ; ಪೊಲೀಸರಿಗೆ ಧರ್ಮಸಂಕಟ

ಕೋಲಾರ; ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದೇ ರೀತಿ ಕೋಲಾರದ ಟಿ ಚೆನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ನಡೆಯಿತು. ಈ ವೇಳೆ ಕೋಲಾರ ಸಂಸದ ಎಸ್‌.ಮುನಿಸ್ವಾಮಿ ಹಾಗೂ ಬಂಗಾರಪೇಟೆ ಶಾಸಕ ಎಸ್‌.ನಾರಾಯಣಸ್ವಾಮಿ ವೇದಿಕೆಯಲ್ಲೇ ಕಿತ್ತಾಡಿಕೊಂಡಿದ್ದಾರೆ. ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಇಬ್ಬರೂ ವೇದಿಕೆಯ ಮೇಲೆ ವಾಗ್ವಾದ ಮಾಡಿದ್ದಾರೆ. ಏಕವಚನದಲ್ಲೇ ಬೈದಾಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜು ನೇತೃತ್ವದಲ್ಲಿ ಈ ಸಭೆ ನಡೆಯುತ್ತಿತ್ತು. ಈ ವೇಳೆ ಸಂಸದ ಮುನಿಸ್ವಾಮಿಯವರು ಭೂಗಳ್ಳರನ್ನು ಪಕ್ಕದಲ್ಲಿಟ್ಟುಕೊಂಡು ಜನತಾದರ್ಶನ ಮಾಡುತ್ತಿದ್ದೀರಲ್ಲಾ ಎಂದು ಪ್ರಶ್ನೆ ಮಾಡಿದರು. ಸಂಸದರು ಏರುಧ್ವನಿಯಲ್ಲಿ ಮಾತನಾಡುತ್ತಿದ್ದಂತೆ ವೇದಿಕೆ ಮೇಲೆಯೇ ಇದ್ದ ಶಾಸಕ ಎಸ್‌.ನಾರಾಯಣಸ್ವಾಮಿ ಸಿಡಿದೆದ್ದಿದ್ದಾರೆ. ಸಚಿವರ ಮುಂದೆಯೇ ಇಬ್ಬರೂ ಕಿತ್ತಾಡಿಕೊಂಡಿದ್ದಾರೆ.
ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದಾಗ ಪೊಲೀಸರು ಮಧ್ಯಪ್ರವೇಶಿಸಬೇಕಾಯಿತು. ಸಂಸದರನ್ನು ಬಲವಂತವಾಗಿ ವೇದಿಕೆಯಿಂದ ಆಚೆ ಕರೆದೊಯ್ಯಲಾಯಿತು.

Share Post