Districts

ಅಪಘಾತದಲ್ಲಿ ಸಂಸದ ಕರಡಿ ಸಂಗಣ್ಣ ಸಹೋದರ ಸಾವು

ಕೊಪ್ಪಳ: ಸಂಸದ ಸಂಗಣ್ಣ ಕರಡಿ ಅವರ ಸಹೋದರ ಬಸವರಾಜ ಅಮರಪ್ಪ ಕರಡಿ (60) ಇಂದು ಬೆಳಗ್ಗೆ ಅಪಘಾತದಲ್ಲಿ ಮೃತರಾಗಿದ್ದಾರೆ. ತಾಲ್ಲೂಕಿನ ಟಣಕನಲ್ ನಿವಾಸಿಯಾಗಿರುವ ಅವರು ಸಮೀಪದ ಹನುಮನಳ್ಳಿ ಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು, ಬಸವರಾಜ ಕರಡಿಯವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ಬಸವರಾಜ ಕರಡಿ ಅವರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸಂಸದ ಸಂಗಣ್ಣ ಕರಡಿ ಅವರು ಸುದ್ದಿ ತಿಳಿಯುತ್ತಲೇ ನವದೆಹಲಿಯಿಂದ ಟಣಕನಕಲ್ ಗ್ರಾಮಕ್ಕೆ ಆಗಮಿಸಿದ್ದಾರೆ.

Share Post