DistrictsPolitics

ನಾಳೆ ಮಂಡ್ಯ ಜಿಲ್ಲೆಗೆ ಅಮಿತ್‌ ಷಾ ಆಗಮನ; ಸಕ್ಕರೆನಾಡು ಕೇಸರಿಮಯ

ಮಂಡ್ಯ; ನಾಳೆ ಮಂಡ್ಯ ನಗರದಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಕೇಸರಿಮಯವಾಗಿದೆ. ಇನ್ನು ಅಮಿತ್‌ ಷಾ ಸ್ವಾಗತಿಸುವ ಫ್ಲೆಕ್ಸ್‌ಗಳಲ್ಲಿ ಸಂಸದೆ ಸುಮಲತಾ ಫೋಟೋ ಕಾಣಿಸಿಕೊಂಡಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಸುಮಲತಾ ಅವರು ಬಿಜೆಪಿಗೆ ಹೋಗುತ್ತಾರೆಂಬ ಅನುಮಾನಕ್ಕೆ ಪುಷ್ಠಿ ನೀಡಿದೆ.

ಮಂಡ್ಯ ಜಿಲ್ಲೆ ಹೆದ್ದಾರಿ ಹಾಗೂ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ. ಅಮಿತ್ ಶಾಗೆ ಸ್ವಾಗತ ಕೋರುವ ಫ್ಲೆಕ್ಸ್ ಗಳು ಕೂಡಾ ಹಾಕಲಾಗಿದೆ. ಈ ಫ್ಲೆಕ್ಸ್ ನಲ್ಲಿ ಸ್ವಾಭಿಮಾನಿ ಸಂಸದೆ ಸುಮಲತಾ ಭಾವಚಿತ್ರವಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಂಸದೆ ಆಪ್ತ ಇಂಡವಾಳು ಸಚ್ಚಿದಾನಂದ ಸ್ವಾಗತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ಫೋಟೋ ಹಾಕಲಾಗಿದೆ. ಸುಮಲತಾ ಅನುಮತಿ ಪಡೆದೆ ಬಿಜೆಪಿ ಸೇರಿರುವುದಾಗಿ ಹೇಳಿದ್ದ ಸಚ್ಚಿದಾನಂದ, ಇದೀಗ ಆಪ್ತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ರಾರಾಜಿಸುತ್ತಿದ್ದಾರೆ. ನಾಳೆ 11 ಗಂಟೆಗೆ ಮಂಡ್ಯಗೆ ಹೆಲಿಕಾಪ್ಟರ್ ಮೂಲಕ ಬರುವ ಅಮಿತ್ ಷಾ, ಬೆಳಗ್ಗೆ 11.15ಕ್ಕೆ ಗೆಜ್ಜಲಗೆರೆಯ ಮನ್‍ಮುಲ್‍ನ ಮೆಗಾ ಡೈರಿ ಉದ್ಘಾಟನೆ ಮಾಡಲಿದ್ದಾರೆ.

Share Post