DistrictsPolitics

ಮುದ್ದಹನುಮೇಗೌಡ ಬಿಜೆಪಿಗೆ ಬರುತ್ತಾರೆ; ಯಡಿಯೂರಪ್ಪ

ಶಿವಮೊಗ್ಗ; ತುಮಕೂರಿನ ಮಾಜಿ ಸಂಸದ ಮುದ್ದ ಹನುಮೆಗೌಡ ಅವರು ಶೀಘ್ರದಲ್ಲೇ ಬಿಜೆಪಿಗೆ ಸೇರಲಿದ್ದಾರೆ ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮುದ್ದ ಹನುಮೆಗೌಡ ಅವರು ನನ್ನನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದರು.

ಮುದ್ದ ಹನುಮೇಗೌಡ ಸೇರಿದಂತೆ ವಿವಿಧ ಪಕ್ಷಗಳ ಅನೇಕ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಬಿಜೆಪಿಗೆ ಸೇರುವವರನ್ನು ಶೀಘ್ರದಲ್ಲಿಯೇ ಪಕ್ಷಕ್ಕೆ ಬರಮಾಡಿಕೊಳ್ಳಲಾಗುವುದು ಎಂದು ಯಡಿಯೂರಪ್ಪ ಇದೇ ವೇಳೆ ತಿಳಿಸಿದರು. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಗುರಿ ಎಂದು ಯಡಿಯೂರಪ್ಪ ಇದೇ ವೇಳೆ ತಿಳಿಸಿದರು.

  ಕಾಂಗ್ರೆಸ್‌ನಲ್ಲಿದ್ದ ಮುದ್ದ ಹನುಮೇಗೌಡ ನಿನ್ನೆಯಷ್ಟೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಕಣಿಗಲ್‌ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದರು.

Share Post