Districts

ನಾವು ಕಾಂಗ್ರೆಸ್‌ ಸೇರಿದ್ರೆ ಸಿದ್ದರಾಮಯ್ಯ ಅಲ್ಲಿರಲ್ಲ; ಸಚಿವ ಮುನಿರತ್ನ

ಕೋಲಾರ : ನಾನು ಮತ್ತು ನನ್ನ ಸ್ನೇಹಿತರು ಎಂದಿಗೂ ಕಾಂಗ್ರೆಸ್‌ ಪಕ್ಷಕ್ಕೆ ವಾಪಸ್‌ ಹೋಗುವುದಿಲ್ಲ. ಒಂದು ವೇಳೆ ಕಾಂಗ್ರೆಸ್‌ ಪಕ್ಷಕ್ಕೆ ನಾವೇನಾದರೂ ಹೋದರೆ, ಸಿದ್ದರಾಮಯ್ಯನವರು ಆ ಪಕ್ಷದಲ್ಲಿ ಇರುವುದಿಲ್ಲ ಎಂದು ಸಚಿವ ಮುನಿರತ್ನ ಹೇಳಿದ್ದಾರೆ.

ಕೋಲಾರದಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಈ ಹಿಂದೆಯೇ ಹೇಳಿದ್ದಾರೆ. ಪಕ್ಷ ಬಿಟ್ಟು ಹೋಗಿರುವವರನ್ನು ಮತ್ತೆ ಸೇರಿಸಿಕೊಳ್ಳುವುದಿಲ್ಲ ಅಂತ. ಅದೂ ವಿಧಾನಸೌಧದಲ್ಲೇ ಹೇಳಿದ್ದಾರೆ. ಹೀಗಾಗಿ ಅಂತಹ ಪರಿಸ್ಥಿತಿ ಯಾವತ್ತೂ ಬರುವುದಿಲ್ಲ ಎಂದು ಸಚಿವ ಮುನಿರತ್ನ ಹೇಳಿದರು. ನಮಗೆ ಕಾಂಗ್ರೆಸ್‌ ಪಕ್ಷಕ್ಕೆ ಹೋಗುವ ಅನಿವಾರ್ಯತೆ ಇಲ್ಲ. ಬಿಜೆಪಿ ನಾಯಕರು ನಮ್ಮನ್ನು ಗೌರವದಿಂದ ನಡೆಸಿಕೊಳ್ಳುತ್ತಿದ್ದಾರೆ. ಮುಂಚೆ ಹೇಳಿದಂತೆ ಅಧಿಕಾರವನ್ನೂ ಕೊಟ್ಟಿದ್ದಾರೆ. ಹೀಗಾಗಿ, ನಾವು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ. ಒಂದು ವೇಳೆ ನಾವೇನಾದರೂ, ಕಾಂಗ್ರೆಸ್‌ ಸೇರಿಬಿಟ್ಟರೆ, ಆಗ ಕಾಂಗ್ರೆಸ್‌ ಬಿಡುವವರಲ್ಲಿ ಸಿದ್ದರಾಮಯ್ಯ ಹಾಗೂ ರಮೇಶ್‌ ಕುಮಾರ್‌ ಮೊದಲಿಗರಾಗಿರುತ್ತಾರೆ ಎಂದು ಮುನಿರತ್ನ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

Share Post