CrimeDistricts

ಮಕ್ಕಳನ್ನು ಮನಸ್ಸು ಕೆಡಿಸಿ ದೂರು ಕೊಡಿಸಿದ್ದಾರೆ; ಮುರುಘಾ ಮಠದ ವಕೀಲ

ಚಿತ್ರದುರ್ಗ; ಮಠದ ವಿರೋಧಿಗಳು ಶ್ರೀಗಳ ವಿರುದ್ಧ ಮಕ್ಕಳ ಬುದ್ಧಿ ಕೆಡಿಸಿ ದೂರು ಕೊಡಿಸಿದ್ದಾರೆ ಎಂದು ಚಿತ್ರದುರ್ಗ ಮುರುಘಾ ಮಠದ ಪರ ವಕೀಲ ವಿಶ್ವನಾಥಯ್ಯ  ಆರೋಪ ಮಾಡಿದ್ದಾರೆ. ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿ ಇಬ್ಬರು ವಿದ್ಯಾರ್ಥಿನಿಯರು ಮೈಸೂರಿನಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಇದು ಶ್ರೀಗಳ ವಿರುದ್ಧ ಷಡ್ಯಂತ್ರ ಎಂದು ಕಿಡಿಕಾರಿದ್ದಾರೆ. 

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮುರುಘಾ ಶ್ರೀಗಳು ಪ್ರತಿಕ್ರಿಯಿಸುವ ಸ್ಥಿತಿಯಲ್ಲಿ ಇಲ್ಲ. ಈ ವಿಚಾರದಲ್ಲಿ ಶರಣರಿಗೆ ನೋವಾಗಿದೆ. ಮಠದ ವಿರೋಧಿ ಶಕ್ತಿಗಳು, ಅತಿಯಾದ ಆಸೆಯಿಂದ ಮಕ್ಕಳನ್ನು ಬಳಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಶ್ರೀಗಳ ವಿರುದ್ಧ ಮಕ್ಕಳ ಬುದ್ಧಿ ಕೆಡಿಸಿ ದೂರು ಕೊಡಿಸಿದ್ದಾರೆ ಎಂದು ವಕೀಲ ವಿಶ್ವನಾಥಯ್ಯ ಹೇಳಿದ್ದಾರೆ.

 

Share Post