DistrictsPolitics

ಮೈಸೂರು ಜಿಲ್ಲೆ ಪ್ರವೇಶಿಸಿದ ಭಾರತ್‌ ಜೋಡೋ ಯಾತ್ರೆ

ಮೈಸೂರು; ರಾಜ್ಯದಲ್ಲಿ ಭಾರತ್‌ ಜೋಡೋ ಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಗೆ ಬಂದಿದ್ದ ಯಾತ್ರೆ ಇಂದು ಮೈಸೂರು ಜಿಲ್ಲೆ ಪ್ರವೇಶ ಮಾಡಿದೆ.

ಇಂದು ಬೆಳಗ್ಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ತೊಂಡವಾಡಿ ಗ್ರಾಮದಿಂದ ರಾಹುಲ್ ಗಾಂಧಿ ಜೊತೆ‌ ವಿಧಾನಸಭೆಯ‌ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮುಖಂಡರು ಜೊತೆಯಾದರು. ಪಾದಯಾತ್ರೆ ಮೈಸೂರು ಜಿಲ್ಲೆಯ ಗಡಿ ಪ್ರವೇಶಿಸುತ್ತಿದ್ದಂತೆ ನೆರೆದಿದ್ದ ಸಹಸ್ರಾರು ಮಂದಿ ಅದ್ದೂರಿ ಸ್ವಾಗತ ಕೋರಿದರು. ವಿವಿಧ ಕಲಾ ತಂಡಗಳು ಪಾದಯಾತ್ರೆಯ ಮೆರುಗು ಹೆಚ್ಚಿಸಿವೆ.

Share Post