CrimeDistricts

ತಲೆ ಕೂದಲು ಉದುರುತ್ತಿದೆ ಅಂತ ಮೈಸೂರು ಯುವತಿ ಆತ್ಮಹತ್ಯೆ..!

ಮೈಸೂರು; ಇತ್ತೀಚೆಗೆ ಯುವ ಸಮುದಾಯ ಸಣ್ಣ ಪುಟ್ಟದ್ದಕ್ಕೆಲ್ಲಾ ಮಾನಸಿಕ ಖಿನ್ನತೆಗೊಳಗಾಗುತ್ತಿದೆ. ಅದು ವಿಪರೀತವಾಗಿ ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ. ಅದೇ ತರಾ ಮೈಸೂರಿನಲ್ಲಿ ಚಿಕ್ಕದೊಂದು ವಿಚಾರಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಲೆಕೂದಲು ಹೆಚ್ಚಾಗಿ ಉದುರುತ್ತಿವೆ. ಏನು ಮಾಡಿದರೂ ಸಮಸ್ಯೆಗೆ ಪರಿಹಾರ ಸಿಗ್ತಿಲ್ಲ ಅಂತ ಮನನೊಂದು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. 

ಕಾವ್ಯಶ್ರೀ(22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೈಸೂರಿನ ರಾಘವೇಂದ್ರ ನಗರ ಬಡಾವಣೆಯಲ್ಲಿನ ತಮ್ಮ ಮನೆಯಲ್ಲೇ ಕಾವ್ಯಶ್ರೀ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.  ಕಳೆದ ಹಲವು ದಿನಗಳಿಂದ ಪತ್ಮಂಡೆ ಸಮಸ್ಯೆಯಿಂದ ಬಳಲುತ್ತಿದ್ದ ಕಾವ್ಯಶ್ರೀಗೆ ಕೂದಲು ಉದುರುತ್ತಿತ್ತು. ಸಾಕಷ್ಟು ಚಿಕಿತ್ಸೆ ಪಡೆದರೂ ಪರಿಹಾರ ದೊರೆತಿರಲಿಲ್ಲ. ಕೂದಲು ಸಂಪೂರ್ಣವಾಗಿ ಕಳೆದುಕೊಂಡಿದ್ದಳು ಎನ್ನಲಾಗಿದೆ.  ಇದರಿಂದ ಬೇಸತ್ತ ಆಕೆ ಸಾವಿನ ದಾರಿ ಹಿಡಿದಿದ್ದಾಳೆ ಎಂದು ತಿಳಿದುಬಂದಿದೆ.

 

Share Post