DistrictsPolitics

ಜನವರಿ ಒಳಗೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ; ನಳಿನ್‌ ಕುಮಾರ್‌ ಕಟೀಲ್‌

ಮಂಡ್ಯ; ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಒಂದೂವರೆ ಕೋಟಿ ರೂಪಾಯಿಯನ್ನು ಚೆಕ್‌ ಮೂಲಕ ಲಂಚವಾಗಿ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಜನವರಿ ಒಳಗೆ ಜೈಲು ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಜನಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು, ಜನವರಿ ವೇಳೆಗೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ. ಜಾಮೀನಿನ ಮೇಲೆ ಹೊರಬಂದು ಚುನಾವಣೆ ಎದುರಿಸಿದರೂ ಸೋಲೋದು ಗ್ಯಾರೆಂಟಿ. ಚುನಾವಣೆ ನಂತರ ಅವರು ನಿರುದ್ಯೋಗಿಯಾಗಲಿದ್ದಾರೆ ಎಂದು ಹೇಳಿದರು.ʼ

ನಿಮ್ಮ ಮೇಡಂ ಸೋನಿಯಾ ಗಾಂಧಿ, ನಿಮ್ಮ ನಾಯಕ ರಾಹುಲ್‌ ಗಾಂಧಿ ಈಗಾಗಲೇ ಜಾಮೀನಿನ ಮೇಲೆ ಹೊರಗಿದ್ದಾರೆ. ಸಿದ್ದರಾಮಯ್ಯ ಅವರು ಸಹಾ ಜೈಲಿಗೆ ಹೋಗೋದು ಗ್ಯಾರೆಂಟಿ ಎಂದು ಕಟೀಲ್‌ ಹೇಳಿದರು. ಭ್ರಷ್ಟಾಚಾರ, ಭಯೋತ್ಪಾದನೆ ಕಾಂಗ್ರೆಸ್‌ ಕೊಡುಗೆ ಎಂದು ಹೇಳಿದರು.

Share Post