Districts

ನ್ಯೂ ಇಯರ್‌ ಮಾಡಿದರೆ ಮುತಾಲಿಕ್‌ ಧರಣಿ

ಹುಬ್ಬಳ್ಳಿ: ಹಿಂದು ಧರ್ಮಕ್ಕೆ ವಿರೋಧವಾಗಿ ನಡೆದುಕೊಂಡರೆ ಜ.೧ ರಂದು ಹೊಸ ವರ್ಷಾಚರಣೆ ಮಾಡಿದರೆ ಧರಣಿ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್‌ ಎಚ್ಚರಿಕೆ ನೀಡಿದ್ದಾರೆ.
ಈ ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಕ್ರೈಸ್ತರ ಹೊಸ ವರ್ಷವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಸ್ವಾಗತ ಫಲಕ ಅಳವಡಿಕೆ, ದೀಪಾಲಂಕಾರ, ವಿಶೇಷ ಪೂಜೆಯೊಂದಿಗೆ ಸಿಹಿ ವಿತರಿಸಲಾಗುತ್ತಿದೆ. ಇದರಿಂದಾಗಿ ಹಿಂದೂ ಧರ್ಮಕ್ಕೆ ತಪ್ಪು ಸಂದೇಶ ಹೋಗುತ್ತದೆ ಎಂದರು.
ಇನ್ನು ರಾಜ್ಯದ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಮಸೂದೆ ಮಂಡಿಸಿರುವುದು ಸ್ವಾಗತಾರ್ಹವಾದರೂ, ಇದರ ಹಿಂದೆ ಹಿಂದೂಗಳ ಓಲೈಸುವ ತಂತ್ರವಿದೆ. ಗೋಹತ್ಯೆ ನಿಷೇಧ ಕಾಯ್ದೆಯಂತೆ ಇದು ನೆಪ ಮಾತ್ರಕ್ಕೆ ಇರುವಂತಾಗಬಾರದು ಎಂದರು.

Share Post