DistrictsPolitics

ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ!

ಶಿವಮೊಗ್ಗ; ಎಂಟು ತಿಂಗಳ ಹಿಂದೆಯಷ್ಟೇ ಆಕೆ ಪ್ರೀತಿಸಿ ಮದುವೆಯಾಗಿದ್ದಳು. ಸುಂದರಿಯೂ ಆಗಿದ್ದ ಯುವತಿ, ಅದ್ಯಾಕೋ ಎಂಟು ತಿಂಗಳಿಗೇ ಜೀವನ ಬೇಡ ಎನಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. 

24 ವರ್ಷ ಶಮಿತಾ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆಯಾಗಿದ್ದಾಳೆ. ಈಕೆ ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದವಳು. ದಾಸನಕೊಡಿಗೆ ಗ್ರಾಮದ  ವಿದ್ಯಾರ್ಥ್ ಹಾಗೂ ಶಮಿತಾ ಪರಸ್ಪರ ಪ್ರೀತಿಸುತ್ತಿದ್ದರು. ವಿದ್ಯಾರ್ಥ್ ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕೆಲಸ ನಿರ್ವಹಿಸುತ್ತಾರೆ. ಇವರಿಬ್ಬರ ಮದುವೆ 2023ರ ಮಾರ್ಚ್‌ನಲ್ಲಿ ನಡೆದಿತ್ತು. ಆದ್ರೆ ಅದೇನಾಯ್ತೋ ಏನೋ, ನಿನ್ನೆ ಪತಿ ರಾತ್ರಿ ಪಾಳಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಮಿತಾ, ಮನೆಯ ಮೇಲಿನ ಕೊಠಡಿಯಲ್ಲಿ ಮಲಗಿದ್ದಳು. ಬೆಳಗ್ಗೆ ಎಷ್ಟು ಹೊತ್ತಾದರೂ ಆಕೆ ಹೊರಗೆ ಬಂದಿಲ್ಲ. ಹೀಗಾಗಿ ಅನುಮಾನಗೊಂಡು ಕಿಟಕಿ ತೆರದು ನೋಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಶಮಿತಾ ಡೆತ್‌ನೋಟ್‌ ಕೂಡಾ ಬರೆದಿಟ್ಟಿದ್ದಾಳೆ. ಆರೋಗ್ಯ ಸಮಸ್ಯೆ ಇದೆ. ಈ ಹಿನ್ನೆಲೆಯಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿಟ್ಟಿದ್ದಾಳೆ. ಆಗುಂಬೆ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದೆ.

 

Share Post