CrimeDistricts

ಮಂಗಳೂರಿನಲ್ಲಿ ಎಸ್‌ಡಿಪಿಐ ಕಚೇರಿ ಬಾಗಿಲು ಕತ್ತರಿಸಿ ಒಳ ನುಗ್ಗಿದ ಅಧಿಕಾರಿಗಳು..!

ಮಂಗಳೂರು; ದೇಶದ ಹತ್ತು ರಾಜ್ಯಗಳಲ್ಲಿ ಎನ್‌ಐಎ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲೂ ದಾಳಿ ನಡೆಸಲಾಗಿದ್ದು, ಇಲ್ಲಿ ಎಸ್‌ಡಿಪಿಐ ಕಚೇರಿಯ ಬಾಗಿಲನ್ನು ಕತ್ತರಿಸಿ ಅಧಿಕಾರಿಗಳು ಒಳ್ಳನುಗ್ಗಿದ್ದಾರೆ. ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. 

ಎಸ್‍ಡಿಪಿಐ ಕಚೇರಿಯ ಬೀಗವನ್ನು ಬ್ಲೇಡ್‍ನಿಂದ ಕಟ್ ಮಾಡಿ ಕಚೇರಿಯ ಶಟರ್ ತೆರೆದಿದ್ದಾರೆ. ಅನಂತರ ಒಳಗಿನ ಡೋರ್‌ನ ಗಾಜು ಪುಡಿ ಮಾಡಿದ್ದಾರೆ. ಕಚೇರಿಯೊಳಗೆ ನುಗ್ಗಿದ ಎನ್‍ಐಎ ಅಧಿಕಾರಿಗಳು ಅಲ್ಲಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕಂಪ್ಯೂಟರ್ ಹಾರ್ಡ್‍ಡಿಸ್ಕ್‌ನ್ನು ವಶಕ್ಕೆ ಪಡೆದಿದ್ದಾರೆ.

 

Share Post