BengaluruDistricts

ಬೆಂಗಳೂರು ಉತ್ತರ ವಿವಿ ಕುಲಪತಿಯಾಗಿ ನಿರಂಜನ ವಾನಳ್ಳಿ ನೇಮಕ

ಬೆಂಗಳೂರು: ಅಂಕಣಕಾರ ಹಾಗೂ ಪತ್ರಿಕೋದ್ಯಮ ಪ್ರಾಧ್ಯಾಪಕ ನಿರಂಜನ ವಾನಳ್ಳಿಯವರನ್ನು ಬೆಂಗಳೂರು ಉತ್ತರ ವಿವಿ ಕುಲಪತಿಯನ್ನಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ರಾಜಭವನದಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿದೆ.


ಸದ್ಯ ಪ್ರೊಫೆಸರ್‌ ನಿರಂಜನ ವಾನಳ್ಳಿಯವರು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಂವಹನ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಶೀಘ್ರದಲ್ಲೇ ಅವರು ಬೆಂಗಳೂರು ಉತ್ತರ ವಿವಿ ಕುಲಪತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅಧಿಕಾರ ವಹಿಸಿಕೊಂಡ ದಿನದಿಂದ 4 ವರ್ಷಗಳ ಅವಧಿ ಅಥವಾ ಅವರಿಗೆ 67 ವರ್ಷ ತುಂಬುವವರೆಗೆ ಇವರೆಡರಲ್ಲಿ ಯಾವುದು ಬೇಗ ಮುಗಿಯುತ್ತದೆಯೋ ಅಲ್ಲಿಯವರೆಗೂ ಅವರು ಅಧಿಕಾರದಲ್ಲಿರುತ್ತಾರೆ.

Share Post